Mandya Breaking: ವಿಸಿ ನಾಲೆಗೆ ಬಿದ್ದ ಕಾರು: ಪ್ರಾಣಾಪಾಯದಿಂದ ಪಾರಾದ ಚಾಲಕ!

0
Spread the love

ಮಂಡ್ಯ:- ಮಂಡ್ಯ ತಾಲೂಕಿನ ಬಿ.ಯರಹಳ್ಳಿ ಬಳಿಯ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜರುಗಿದೆ.

Advertisement

ಮಂಡ್ಯದ ಕಲ್ಲಹಳ್ಳಿ ನಿವಾಸಿ ಕೃಷ್ಣ ಎಂಬವರು ಕ್ರೇಟಾ ಕಾರು ಚಲಾಯಿಸುತ್ತಿದ್ದರು. ಕಿರಿದಾದ ರಸ್ತೆ, ತಡೆಗೋಡೆ ಇಲ್ಲದ ಕಾರಣ ಬೆಳಗಿನ ಜಾವ 4:30ರ ಸುಮಾರಿಗೆ ಘಟನೆ ಸಂಭವಿಸಿದೆ. ಕಿರಿದಾದ ರಸ್ತೆ, ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದೆ. ಕಾರು ನಾಲೆಗೆ ಬೀಳುತ್ತಿದ್ದಂತೆ ಚಾಲಕ ಕೃಷ್ಣ ಕಾರಿನಿಂದ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ.

ಸದ್ಯ ನಾಲೆಯಲ್ಲಿ ಮುಳುಗಿದ್ದ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here