ವಿಜಯಸಾಕ್ಷಿ ಸುದ್ದಿ, ನವದೆಹಲಿ
ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಸಚಿವರ ಪಟ್ಟಿಯನ್ನು ಹೈಕಮಾಂಡ್ ಫೈನಲ್ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ರಾತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಎರಡು ಗಂಟೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಾಧ್ಯಕ್ಷರೊಂದಿಗೆ ನಡೆಸಿದ ಮಾತುಕತೆ ಸಕಾರಾತ್ಮಕವಾಗಿದೆ. ಹೈಕಮಾಂಡ್ ಗೆ ಮೂರು ಪಟ್ಟಿ ಸಲ್ಲಿಸಿದ್ದೇವೆ. ಈ ಪಟ್ಟಿಯಲ್ಲಿರುವ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು. ಯಾರನ್ನು ಬಿಡಬೇಕು ಎಂಬುದನ್ನು ವರಿಷ್ಠರು ಸಭೆ ಸೇರಿ ಚರ್ಚಿಸಿ ಅಂತಿಮ ಪಟ್ಟಿ ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ಬೆಳಗ್ಗೆ ಸಂಸತ್ ಅಧಿವೇಶ ಇರುವುದರಿಂದ ಸಂಜೆ ವರಿಷ್ಠರು ಸಭೆ ನಡೆಸಲಿದ್ದಾರೆ. ಎಷ್ಟು ಜನ ಡಿಸಿಎಂಗಳು ಇರಬೇಕು ಎಂಬುದನ್ನು ವರಿಷ್ಠರೇ ತೀರ್ಮಾನಿಸಲಿದ್ದಾರೆ. ಒಟ್ಟಾರೆ ನಾಳೆ ರಾತ್ರಿ ಒಳಗೆ ಸಚಿವರ ಪಟ್ಟಿ ಸಿದ್ದವಾಗುವ ವಿಶ್ವಾಸವಿದೆ ಎಂದು ಸಿಎಂ ತಿಳಿಸಿದರು.