ಕಬ್ಬು ಪ್ರತಿ ಟನ್‌ʼಗೆ 3,300 ರೂ.: ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

0
Spread the love

ಬೆಂಗಳೂರು: ರಾಜ್ಯ ಸರ್ಕಾರ 2025-26ನೇ ಹಂಗಾಮಿನಲ್ಲಿ ಕಬ್ಬು ಬೆಲೆಯನ್ನು ಪ್ರತಿ ಟನ್ ₹3,300ಗೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ನಡುವೆ ಸಭೆ ನಡೆದಿತ್ತು.

Advertisement

ಸಭೆಯಲ್ಲಿ ರೈತರಿಗೆ ಹೆಚ್ಚುವರಿ ₹100 ನೀಡುವಂತೆ ನಿರ್ಣಯಗೊಂಡಿತ್ತು. ಇದರಂತೆ, ₹50 ಕಾರ್ಖಾನೆಗಳು ಮತ್ತು ₹50 ರಾಜ್ಯ ಸರ್ಕಾರ ನೀಡುವಂತೆ ಆದೇಶ ನೀಡಿದೆ. ಈ ತೀರ್ಮಾನದಿಂದ ರಾಜ್ಯದ ಕಬ್ಬು ರೈತರಿಗೆ ಆರ್ಥಿಕ ಪರಿಹಾರ ಹಾಗೂ ಪ್ರೋತ್ಸಾಹ ದೊರೆಯಲಿದೆ.

ಆದೇಶದಂತೆ 9.5% ಅಥವಾ ಕಡಿಮೆ ರಿಕವರಿ ದರ ಕಬ್ಬಿಗೆ ಪ್ರತಿ ಟನ್​​ಗೆ ಕಾರ್ಖಾನೆಗಳು ಕೇಂದ್ರ ಸರ್ಕಾರದ ಎಫ್ಆರ್​​ಪಿ ದರದ ಅನ್ವಯ ರೈತರಿಗೆ ನೀಡಲು ಒಪ್ಪಿರುವ ಮೊತ್ತದ ಮೇಲೆ ಸಕ್ಕರೆ ಕಾರ್ಖಾನೆ ವತಿಯಿಂದ 50 ರೂ. ಮತ್ತು ರಾಜ್ಯ ಸರ್ಕಾರದ ವತಿಯಿಂದ 50 ರೂ. ಸೇರಿ ಹೆಚ್ಚುವರಿ 100 ರೂ. ನೀಡಲಾಗುವುದು.

ಅದೇ ರೀತಿ 10.25% ರಿಕವರಿ ದರಕ್ಕೆ ಕಾರ್ಖಾನೆಗಳು ರೈತರಿಗೆ ಸಾಗಾಟ ಹಾಗೂ ಕಟಾವು ವೆಚ್ಚ ಹೊರತುಪಡಿಸಿ ಪ್ರತಿ ಟನ್ ಕಬ್ಬಿಗೆ 3,100 ರೂ. ನೀಡಲು ಒಪ್ಪಿದೆ‌. ಅದರ ಮೇಲೆ ಹೆಚ್ಚುವರಿ 100 ರೂ. ಸೇರಿಸಿ ಪ್ರತಿ ಟನ್ 3,200 ರೂ. ನಿಗದಿಪಡಿಸಿ ಆದೇಶಿಸಲಾಗಿದೆ. ಇನ್ನು 11.25% ರಿಕವರಿ ದರಕ್ಕೆ ಸಕ್ಕರೆ ಕಾರ್ಖಾನೆಗಳು ರೈತರಿಗೆ ಸಾಗಾಟ ಹಾಗೂ ಕಟಾವು ವೆಚ್ಚ ಹೊರತು ಪಡಿಸಿ ಪ್ರತಿ ಟನ್ ಕಬ್ಬಿಗೆ 3,200 ರೂ. ನೀಡಲು ಸರ್ಕಾರ ಒಪ್ಪಿದೆ. ಅದರ ಮೇಲೆ ಹೆಚ್ಚುವರಿ 100 ರೂ. ಸೇರಿಸಿ ಪ್ರತಿ ಟನ್​​ಗೆ 3,300 ರೂ. ನಿಗದಿಗೊಳಿಸಿ ಆದೇಶಿಸಲಾಗಿದೆ.

10.25 – 9.5% ಸಕ್ಕರೆ ಇಳುವರಿ ಪ್ರಮಾಣ ನಡುವೆ ಪ್ರತಿ 0.1% ಕಡಿಮೆ ಸಕ್ಕರೆ ಇಳುವರಿಗೆ ಅನುಪಾತಕ್ಕೆ ಅನುಗುಣವಾಗಿ 3.46 ರೂ. ಮೊತ್ತವನ್ನು ಪ್ರತಿ ಕ್ವಿಂಟಾಲ್‌ಗೆ ಪರಿಗಣಿಸುವುದು. 11.25 – 10.25% ಸಕ್ಕರೆ ಇಳುವರಿ ಪ್ರಮಾಣದ ನಡುವೆ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ, ಪ್ರತಿ 0.1% ಕಡಿಮೆ ಸಕ್ಕರೆ ಇಳುವರಿಗೆ ಅನುಪಾತಕ್ಕೆ ಅನುಗುಣವಾಗಿ 1 ರೂ. ಮೊತ್ತವನ್ನು ಪ್ರತಿ ಕ್ವಿಂಟಾಲ್‌ಗೆ ಪರಿಗಣಿಸುವಂತೆ ಆದೇಶಿಸಲಾಗಿದೆ.

Spread the love

LEAVE A REPLY

Please enter your comment!
Please enter your name here