ನವದೆಹಲಿ/ ಬೆಂಗಳೂರು:- ನವದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಪೋಟ ಕೇಸ್ ಗೆ ಸಂಬಂಧಿಸಿದಂತೆ ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಏರ್ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ. ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಮಾಡಬೇಕು. ಲಾಡ್ಜ್ಗಳನ್ನು ತಪಾಸಣೆ ಮಾಡಿ, ಲಾಡ್ಜ್ನಲ್ಲಿ ತಂಗಿರುವ ಹೊರ ರಾಜ್ಯದವರ ವಿಚಾರಣೆ ಮಾಡಬೇಕು. ರಾತ್ರಿ ವೇಳೆ ಗಸ್ತು ಹೆಚ್ಚಳ ಮಾಡುವಂತೆ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.


