ಸಾವಿನಲ್ಲೂ ಒಂದಾದ ದಂಪತಿ

0
Spread the love

ವಿಜಯಸಾಕ್ಷಿ ಸುದ್ದಿ, ಹಾವೇರಿ

Advertisement

ಪತ್ನಿಯ ಸಾವಿನ ಸುದ್ದಿ ಕೇಳಿ ಪತಿಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಕಂಚಾರಗಟ್ಟಿ ಗ್ರಾಮದಲ್ಲಿ ನಡೆದಿದೆ.

ಹೊನ್ನಮ್ಮ ಶೇಖರಗೌಡ ಹುಳ್ಯಾಳ (60), ಶೇಖರಗೌಡ ಹುಳ್ಯಾಳ (65) ಮೃತ ದಂಪತಿ. ಅನಾರೋಗ್ಯದಿಂದ ಬಳಲುತ್ತಿದ್ದ ಹೊನ್ನಮ್ಮ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಕೊನೆ ಉಸಿರೆಳೆದಿದ್ದರು.

ಪತ್ನಿಯ ಸಾವಿನ ಸುದ್ದಿ ಕೇಳಿದ ಶೇಖರಗೌಡ ಹೃದಯಾಘಾತ ಉಂಟಾಗಿ ತಕ್ಷಣ ಮೃತಪಟ್ಟಿದ್ದಾರೆ. ಬದುಕಿನ ಪಯಣದಲಿ ಸುಖ- ದುಃಖ ಹಂಚಿಕೊಂಡು ಬಾಳಿದ್ದ ಜೋಡಿ ಸಾವಿನಲ್ಲೂ ಒಂದಾಗಿ ಜೀವನದ ಪಯಾಣ ಮುಗಿಸಿದೆ.

ಎರಡು ಹಿರಿಯ ಜೀವಗಳು ಒಟ್ಟಿಗೆ ಅಗಲಿರುವುದು ಹುಲ್ಯಾಳ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.


Spread the love

LEAVE A REPLY

Please enter your comment!
Please enter your name here