ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಬ್ರೇನ್ ಬಸ್ಟರ್ ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನಿರ್ಣಾಯಕರಾಗಿ ವಿಜ್ಞಾನ ಕ್ಷೇತ್ರದ ವಿಶೇಷ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಶಿಕ್ಷಕರಾದ ಮಹಮ್ಮದ ರಫೀಕ ಸವದತ್ತಿ ಆಗಮಿಸಿ ವಿದ್ಯಾರ್ಥಿಗಳಿಗೆ ಪಿಪಿಟಿ ಮೂಲಕ ಪ್ರಶ್ನೆಗಳನ್ನು ಕೇಳಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರ್ಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಕಾಲೇಜು ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿಗೆ ರಸಪ್ರಶ್ನೆಗಳಂತಹ ಕಾರ್ಯಕ್ರಮಗಳು ಪೂರಕ ವೇದಿಕೆಯಾಗಿವೆ. ಸಮಯ ನಿರ್ವಹಣೆ, ಏಕಾಗ್ರತೆ, ಕೌಶಲ್ಯಗಳನ್ನು ಸರಿಯಾಗಿ ಅಳವಡಿಸಿಕೊಳ್ಳಿ ಎಂದು ಹೇಳಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿದರು.
ಸ್ಪರ್ಧೆಯಲ್ಲಿ ಮಲಪ್ರಭಾ ತಂಡ-ಜೆ.ಟಿ. ಕಾಲೇಜು ಗಜೇಂದ್ರಗಡ ಪ್ರಥಮ, ಶರಾವತಿ ತಂಡ ಜೆ.ಟಿ. ಕಾಲೇಜು ಗದಗ ದ್ವಿತೀಯ, ತುಂಗಾ ತಂಡ-ಜೆ.ಟಿ. ಕಾಲೇಜು ಗದಗ ತೃತೀಯ ಸ್ಥಾನ ಪಡೆದುಕೊಂಡರು.
ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಹಾಗೂ ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರಿಯಾಂಕಾ ಕಬಾಡಿ, ಯಶವಂತ ಕಲಬುರ್ಗಿ, ಶಾಹಿದಾ ಶಿರಹಟ್ಟಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


