ಚಳಿ ತಾಳಲಾರದೇ ಇದ್ದಿಲಿನಿಂದ ಬೆಂಕಿ ಹಾಕಿ ನಿದ್ರೆ: ಉಸಿರುಗಟ್ಟಿ ಮೂವರು ಯುವಕರು ಸಾವು!

0
Spread the love

ಬೆಳಗಾವಿ:- ಕೊರೆಯುವ ಚಳಿಯಿಂದ ಹಾಗೂ ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು ಮನೆಯಲ್ಲಿ ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ.

Advertisement

ಕೊರೆಯುವ ಚಳಿಯಿಂದ ಹಾಗೂ ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು ಯುವಕರು ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದರು ಎನ್ನಲಾಗಿದೆ. ಈ ವೇಳೆ ದಟ್ಟ ಹೊಗೆ ಹಾಗೂ ಸರಿಯಾದ ಆಮ್ಲಜನಕ ಪೂರೈಕೆಯಾಗದೇ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಓರ್ವ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ನಿನ್ನೆ ರಾತ್ರಿಯಿಂದ ಸಂಜೆ 4 ಗಂಟೆಯವರೆಗೂ ಯಾರೇ ಬಾಗಿಲು ಬಡಿದರೂ ಸಹ ಕೇಳಿಲ್ಲ ಹಾಗೂ ಬಾಗಿಲು ತೆರೆದಿಲ್ಲ ಕೋಣೆಯಲ್ಲಿ ಎಲ್ಲಿಯೂ ವೆಂಟಿಲೇಶನ್ ಇಲ್ಲದೇ ಆಮ್ಲಜನಕ ಕೊರತೆಯಿಂದ ರಿಹಾನ್, ಮೊಹಿನ್, ಸರ್ಫರಾಜ ಎಂಬ ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ಧು ಶಾಹಾನವಾಜ ಸ್ಥಿತಿ ಗಂಭೀರವಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿಯಲ್ಲಿ ಸಂಭವಸಿರೋ ಈ ಘೋರ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಇಂಚಿಂಚೂ ಮಾಹಿತಿ ಪಡೆಯುತ್ತಿದ್ದಾರೆ. ಯುವರಕ ಸಾವು ಸ್ವಾಭಾವಿಕವೋ ಅಥವಾ ಇನ್ಯಾರದ್ದೋ ಕೈವಾಡವಿದೆಯೋ ಎನ್ನುವ ನಿಟ್ಟಿನಲ್ಲೂ ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here