ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮಿ ನಗರದಲ್ಲಿ ಅಕ್ಟೋಬರ್ ತಿಂಗಳಲ್ಲಿ ಮನೆಯೊಂದರ ಹಿತ್ತಲ ಬಾಗಿಲು ಮುರಿದು ಮನೆಯಲ್ಲಿದ್ದ ಬೆಳ್ಳಿ, ಬಂಗಾರದ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ಟೋಬರ್ 29ರಂದು ನಡೆದಿದ್ದ ಕಳವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಹೋಟೆಲ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ದ್ಯಾಮಣ್ಣ ಗಂಗಪ್ಪ ಕಂಬಳಿ ಎಂಬುವನನ್ನು ಬಂಧಿಸಿ, ಬಂಧಿತನಿಂದ ಒಟ್ಟು 17 ಗ್ರಾಂ ಬಂಗಾರದ ಆಭರಣಗಳು ಹಾಗೂ 55 ಗ್ರಾಂ ಬೆಳ್ಳಿ ಆಭರಣಗಳು, ಒಟ್ಟಾರೆ ₹1,25,000 ಮೌಲ್ಯದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.
ಈ ಪ್ರಕರಣ ಭೇದಿಸುವಲ್ಲಿ ಎಸ್ಪಿ ರೋಹನ್ ಜಗದೀಶ, ಡಿಎಸ್ಪಿ ಮುರ್ತುಜಾ ಖಾರ್ದಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಬಿ.ವಿ. ನ್ಯಾಮಗೌಡ ನೇತೃತ್ವದಲ್ಲಿ ಪಿಎಸ್ಐ ನಾಗರಾಜ ಗಡಾದ, ಟಿ.ಕೆ. ರಾಠೋಡ, ಸಿಬ್ಬಂದಿ ಎಂ.ಎ. ಶೇಖ, ಆರ್.ಎಸ್. ಯರಗಟ್ಟಿ, ಎಂ.ಎಸ್. ಬಳ್ಳಾರಿ, ಎ.ಆರ್. ಕಮ್ಮಾರ, ಎಚ್.ಬಿ. ಗುಡ್ಡಣ್ಣವರ, ಸಿ.ಎಸ್. ಮಠಪತಿ, ಡಿ.ಎಸ್. ನದಾಫ್, ಪಾಂಡುರಂಗರಾವ್, ಎಚ್.ಐ. ಕಲ್ಲನ್ನವರ್, ಎಂ.ಆರ್. ಧಾರವಾಡ, ಎಂ.ಎಸ್. ಅಂಗಡಿ, ಎನ್.ಎಚ್. ಮಠಪತಿ, ಎಎಸ್ಐ ಗುರು ಬೂದಿಹಾಳ, ಸಂಜೀವ ಕೊರಡೂರ, ಅಪ್ಪಣ್ಣ ರಾಠೋಡ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು.
ಪ್ರಕರಣ ಭೇದಿಸಿದ ತಂಡವನ್ನು ಎಸ್ಪಿ ರೋಹನ್ ಜಗದೀಶ ಹಾಗೂ ಡಿಎಸ್ಪಿ ಮುರ್ತುಜಾ ಖಾರ್ದಿ ಅಭಿನಂದಿಸಿದ್ದಾರೆ.


