HomeKarnataka NewsAICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ತೀವ್ರ ಕುತೂಹಲ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ತೀವ್ರ ಕುತೂಹಲ

For Dai;y Updates Join Our whatsapp Group

ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು.

ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img