ವಿಜಯಸಾಕ್ಷಿ ಸುದ್ದಿ, ಮಂಗಳೂರು
ನಗರದ ಹೊರವಲಯದ ಮಾಹಾಕಾಳಿ ಪಡ್ಪು ಎಂಬಲ್ಲಿ ರೈಲ್ವೆ ಹಳಿ ದಾಟುವಾಗ ರೈಲಿಗೆ ಸಿಲುಕಿ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ.
ಮೃತ ಮಹಿಳೆಯರು ಬೀಡಿ ಬ್ರಾಂಚ್ ನಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಮಹಿಳೆಯರು ಕೆಲಸಕ್ಕೆ ಹೋಗುತ್ತಿದ್ದಾಗ
ರೈಲು ಬರುತ್ತಿರುವುದು ಗೊತ್ತಾಗದೆ ಹಳಿ ದಾಟುವಾಗ, ಏಕಾಏಕಿ ರೈಲು ಬಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



