ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ನಿಧನಕ್ಕೆ ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇದಕ್ಕೂ ಮುನ್ನ ಗಜೇಂದ್ರಗಡ-ಉಣಚಗೇರಿ ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಸಿದ್ದಪ್ಪ ಬಂಡಿ ಮಾತನಾಡಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದು ತೀವ್ರ ನೋವುಂಟುಮಾಡಿದೆ. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಹಾಂತೇಶ ಬೀಳಗಿ ಅವರು ಕರ್ತವ್ಯ ನಿರ್ವಹಿಸಿದ ಎಲ್ಲೆಡೆ ದಕ್ಷತೆಯ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಅವರ ಅಗಲಿಕೆ ತುಂಬಲಾರದ ನಷ್ಟವನ್ನು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇವೆ ಎಂದರು.
ಈ ವೇಳೆ ಶರಣಪ್ಪ ರೇವಡಿ, ಬಸವರಾಜ ಬೇಲೇರಿ, ನಾಗಣ್ಣ ಲಕ್ಕಲಕಟ್ಟಿ, ಬಿ.ಎಸ್. ಬಸನಗೌಡರ, ಸಾಗರ ವಾಲಿ, ಮುತ್ತಣ್ಣ ಗುಗ್ಗರಿ, ಬಸವರಾಜ ಹೂಗಾರ, ಮಹೇಶ ಪಲ್ಲೇದ, ಮಲ್ಲಿಕಾರ್ಜುನ ಕೊಟಗಿ, ಮಲ್ಲಿಕಾರ್ಜುನ ಹಡಪದ, ಕಳಕಯ್ಯ ಸಾಲಿಮಠ ಸೇರಿ ಇತರರು ಇದ್ದರು.



