ಬೆಂಗಳೂರು:- ಕೆಪಿಟಿಸಿಎಲ್ ವತಿಯಿಂದ ನಡೆಯುತ್ತಿರುವ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.



