ವಿಜಯಸಾಕ್ಷಿ ಸುದ್ದಿ, ರೋಣ
ಸಾರಿಗೆ ಸಂಸ್ಥೆ ಚಾಲಕ/ನಿರ್ವಾಹಕರೊಬ್ಬರಿಗೆ ರಜೆ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಡಿಪೋ ಮ್ಯಾನೇಜರ್ ನನ್ನು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ರೋಣ ಬಸ್ ಡಿಪೋ ಮ್ಯಾನೇಜರ್ ಬಿ.ಎಂ. ಗೆನ್ನೂರ ಎಸಿಬಿ ದಾಳಿಗೆ ಒಳಗಾದ ಅಧಿಕಾರಿ. ಸಂಸ್ಥೆಯ ನಿರ್ವಾಹಕರೊಬ್ಬರು, ತಾಯಿಗೆ ಹುಷಾರಿಲ್ಲದ ಕಾರಣ ರಜೆ ಕೇಳಿದ್ದರು. ರಜೆ ಮಂಜೂರು ಮಾಡಲು 2 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇಂದು ಹಣ ಕೊಡುವಾಗ ದಾಳಿ ನಡೆಸಿದ ಅಧಿಕಾರಿಗಳು ಡಿಪೋ ಮ್ಯಾನೇಜರನನ್ನು ಬಂಧಿಸಿದ್ದಾರೆ.
ಎಸಿಬಿ ಡಿವೈಎಸ್ಪಿ ಎಂ.ವಿ. ಮಲ್ಲಾಪುರ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್ ಆರ್.ಎಫ್. ದೇಸಾಯಿ, ಈರಣ್ಣ ಹಳ್ಳಿ, ಸಿಬ್ಬಂದಿಗಳಾದ ಎಂ.ಎಂ. ಅಯ್ಯನಗೌಡರ, ವೀರೇಶ ಜೋಳದ, ಎನ್.ಎಸ್. ತಾಯಣ್ಣವರ, ವೀರೇಶ ಬಿಸನಳ್ಳಿ, ಐ.ಸಿ. ಜಾಲಿಹಾಳ, ಶರೀಫ್ ಮುಲ್ಲಾ, ಮಂಜು ಮುಳಗುಂದ ಭಾಗವಹಿಸಿದ್ದರು.