HomeBagalkotಜ.14ರಿಂದ ಸಿದ್ಧಶ್ರೀ’ ರಾಷ್ಟ್ರೀಯ ಉತ್ಸವ

ಜ.14ರಿಂದ ಸಿದ್ಧಶ್ರೀ’ ರಾಷ್ಟ್ರೀಯ ಉತ್ಸವ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬಾಗಲಕೋಟ: ಇಲಕಲ್ಲ ತಾಲೂಕಿನ ಐತಿಹಾಸಿಕ ಸ್ಥಳ ಐಹೊಳೆ ಹತ್ತಿರದ ಉತ್ತರಕರ್ನಾಟಕದ ಕಲಾಪೋಷಕರ ಮಠ ಸಿದ್ಧನಕೊಳ್ಳದ ಸುಕ್ಷೇತ್ರ ಸಿದ್ಧನಕೊಳ್ಳದ `ಸಿದ್ಧಶ್ರೀ’ ರಾಷ್ಟ್ರೀಯ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-2026 ಜ.14, 15 ಮತ್ತು 16ರಂದು ಜರುಗಲಿದ್ದು, ಜ. 14ರಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ, ಜ. 15ರಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ಜ.16ರಂದು ಜಾತ್ರಾಮಹೋತ್ಸವ ಸಮಾರೋಪ ಜರುಗಲಿದೆ ಎಂದು ಧರ್ಮಾಧಿಕಾರಿಗಳಾದ ಡಾ. ಶಿವಕುಮಾರ ಸ್ವಾಮೀಜಿ ತಿಳಿಸಿದರು.

ಸಿದ್ಧನಕೊಳ್ಳದ ಶ್ರೀಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಸಿದ್ಧಶ್ರೀ ಉತ್ಸವದಲ್ಲಿ ಸಹಸ್ರಾರು ಭಕ್ತರು ಸೇರುತ್ತಿದ್ದು, ಸಂಗೀತ, ನೃತ್ಯ, ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನೆರವೇರುತ್ತವೆ. ರಾಜ್ಯ, ಹೊರರಾಜ್ಯಗಳ ವಿವಿಧ ಸಾಧಕರು, ಪ್ರತಿಭಾನ್ವಿತ, ಉದಯೋನ್ಮುಖ ಕಲಾಪ್ರತಿಭೆಗಳಿಗೂ ವೇದಿಕೆ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಚಿತ್ರೋತ್ಸವ ಆಯ್ಕೆ ಸಮಿತಿ ರಚಿಸಲಾಗಿದೆ.

ಸಿನಿಮಾ ಪತ್ರಕರ್ತರಾದ ಡಾ. ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಿಗಿ, ಜ್ಯೂ. ಉಪೇಂದ್ರ ವೀರೇಶ ಪುರವಂತ, ಚಲನಚಿತ್ರ ಕಲಾವಿದರಾದ ಸಂಗನಗೌಡ್ರು ಕುರುಡಗಿ, ಚಲನಚಿತ್ರ ನಿರ್ದೇಶಕ ಅರವಿಂದ ಮುಳಗುಂದ, ನಿರ್ಮಾಪಕ ಲೋಕೇಶ ವಿದ್ಯಾಧರ, ಚಲನಚಿತ್ರ ಕಲಾವಿದೆ ಸುನಂದಾ ಕಲ್ಬುರ್ಗಿ, ಭರತನಾಟ್ಯ ಕಲಾವಿದೆ ಕೃತ್ತಿಕಾ ಕಾರ್ಯ ನಿರ್ವಹಿಸಲಿದ್ದಾರೆ. ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ಇನ್ನೂ ಬಿಡುಗಡೆಯಾಗದ ತಮ್ಮ 2025ರಲ್ಲಿ ನಿರ್ಮಾಣವಾದ, ಆಗುತ್ತಿರುವ ಹೊಸ ಚಲನಚಿತ್ರಗಳ, ಟೆಲಿಫಿಲ್ಮ್, ಕಿರುಚಿತ್ರಗಳ, ಟ್ರೇಲರ್, ಟೀಸರ್ ಮತ್ತು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಬಹುದು.

ಯಾವುದೇ ಪ್ರವೇಶ ಶುಲ್ಕವಿಲ್ಲದೆ ಉಚಿತ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸಿದ ಚಲನಚಿತ್ರ ತಂಡಗಳಿಗೆ ಅಭಿನಂದನಾ ಪತ್ರ, ನೆನಪಿನ ಸ್ಮರಣಿಕೆ, ಕಿರುಚಿತ್ರ ತಂಡಗಳಿಗೆ ಅಭಿನಂದನಾ ಪತ್ರಗಳನ್ನು ನೀಡಲಾಗುತ್ತದೆ. ಆಸಕ್ತರು ಡಿಸೆಂಬರ್ 31ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಬಂದವರಿಗೆ ಅವಕಾಶ ಇರುವುದಿಲ್ಲ ಎಂದು ಶ್ರೀಗಳು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಪ್ರಭು ಗಂಜಿಹಾಳ, ಸಂಗನಗೌಡ ಕುರುಡಗಿ, ವೀರೇಶ ಪುರವಂತ, ವೀರಭದ್ರೇಶ್ವರಸ್ವಾಮಿ ಲಿಂಗಸೂರು, ಕರವೇ ಅಧ್ಯಕ್ಷ ಅಶೋಕ ಪೂಜಾರ, ವೀಣಾ ಹಿರೇಮಠ, ಚಲನಚಿತ್ರ ನಿರ್ದೇಶಕರಾದ ಲೋಕೇಶ ವಿದ್ಯಾಧರ, ಶಿವರಾಜು, ಸ್ಟೈಲ್ ಶಶಿ, ಸಂಗಮೇಶ ಹುದ್ಧಾರ, ಮೈಲಾರಗೌಡ ಗೌಡಪ್ಪಗೌಡರ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಗಳ ಮತ್ತು ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ. ತಮ್ಮ ಟೀಸರ್, ಟ್ರೇಲರ್, ಪೋಸ್ಟರ್‌ಗಳನ್ನು ಡಾ. ಪ್ರಭು ಗಂಜಿಹಾಳ-ವಾಟ್ಸಪ್ ನಂ-9448775346 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಲನಚಿತ್ರೋತ್ಸವ ವಿಭಾಗದ ಡಾ. ವೀರೇಶ ಹಂಡಿಗಿ-ಮೊ: 9060933596, ವೀರೇಶ ಪುರವಂತ-ಮೊ: 7026062364, ಸಂಗನಗೌಡ್ರು ಕುರುಡಗಿ-ಮೊ: 8861811128 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀಗಳು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!