HomeKarnataka News97ನೇ ವಯಸ್ಸಿಗೆ ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ!

97ನೇ ವಯಸ್ಸಿಗೆ ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ!

For Dai;y Updates Join Our whatsapp Group

Spread the love

ವಿಜಯಪುರ:- ತಮ್ಮ 97ನೇ ವಯಸ್ಸಿಗೆ ಜಿಲ್ಲೆಯ ಬಸವನಬಾಗೇವಾಡಿ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚನ್ನಬಸವ ಸ್ವಾಮೀಜಿ ಅವರು 97ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾಳೆ ಸಾಯಂಕಾಲ ಸರ್ಕಾರಿ ಗೌರವಗಳೊಂದಿಗೆ ಸ್ವಾಮೀಜಿಗಳ ಅಂತ್ಯಕ್ರಿಯೆ ನೆರವೇರಲಿದೆ.

ಇನ್ನೂ ಬಸವಾದಿ ಶರಣರ ವಚನಗಳು, ಮಾನವೀಯತೆ, ಸಮಾನತೆ ಸಂದೇಶಗಳನ್ನ ಶಿಲೆಯಲ್ಲಿ ಶ್ರೀಗಳು ಕೆತ್ತಿಸಿದ್ದರು. ಅಲ್ಲದೇ ಅವುಗಳನ್ನ ಶಿಲಾಮಂಟಪದಲ್ಲಿ ಪ್ರತಿಷ್ಠಾಪಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನೂ ಇಂಗಳೇಶ್ವರದಿಂದ ಶ್ರೀಕ್ಷೇತ್ರ ಉಳವಿಯವರೆಗೆ ಪಾದಯಾತ್ರೆ ನಡೆಸಿ, ವಚನ ಸಾರಗಳನ್ನ ಜನಸಾಮಾನ್ಯರಲ್ಲಿ ಬಿತ್ತುವ ಕಾರ್ಯಮಾಡಿದ್ದರು ಎನ್ನಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!