HomeBelgaumಬಿಜೆಪಿ ಹಣದ ಆಫರ್ ಕೊಟ್ಟಿದ್ದು ನಿಜ; ಶಾಸಕ ಪಾಟೀಲ

ಬಿಜೆಪಿ ಹಣದ ಆಫರ್ ಕೊಟ್ಟಿದ್ದು ನಿಜ; ಶಾಸಕ ಪಾಟೀಲ

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ನಾನು ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ದು ನಿಜ ಎಂದು ವಲಸಿಗ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನಗೆ ಹಣದ ಆಫರ್ ಕೊಟ್ಟರೂ ನಾನು ಬೇಡ ಎಂದಿದ್ದೆ. ಯಾವುದೇ ಹಣ ನನಗೆ ಬೇಡ, ಒಳ್ಳೆಯ ಸ್ಥಾನ-ಮಾನ ಬೇಕು ಎಂದಿದ್ದೆ. ಹಣದ ಬದಲು ನನ್ನ ಕ್ಷೇತ್ರದ ಜನರಿಗೆ ಒಳ್ಳೆಯ ಸೇವೆ ಮಾಡುವ ನಿಟ್ಟಿನಲ್ಲಿ ಯೋಗ್ಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಹೇಳಿದ್ದಾರೆ.

ಈಗ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಈ ವಿಚಾರದಲ್ಲಿ ಹಿರಿಯ ನಾಯಕರೊಂದಿಗೆ ಚರ್ಚೆ ಮಾಡಿದ್ದೇನೆ. ಬರುವ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಪ್ರತಿಪಕ್ಷಗಳಿಗೆ ಪ್ರಬಲ‌ ಅಸ್ತ್ರ ಲಭಿಸಿಂತಾಗಿದೆ. ಅಧಿವೇಶನದಲ್ಲಿ ಪ್ರತಿಪಕ್ಷಗಳು ಈ ವಿಷಯ ಹಿಡಿದು ಸರ್ಕಾರದ ಮೇಲೆ‌ ಮುಗಿಬೀಳುವ, ರಾಜ್ಯಪಾಲರ ಮೊರೆ ಹೋಗುವ ಸಾಧ್ಯತೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!