ಶಿವಮೊಗ್ಗ:- ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜರುಗಿದೆ.
ಹತ್ಯೆಯಾದ ಯುವಕರನ್ನು ಕಿರಣ್ (25), ಮಂಜುನಾಥ್ (45) ಎಂದು ಗುರುತಿಸಲಾಗಿದೆ. 2 ದಿನದ ಹಿಂದೆ ಮನೆ ತೊರೆದಿದ್ದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಹುಡುಗನ ಸ್ನೇಹಿತರ ಮೇಲೆ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ದಾಳಿ ಮಾಡಿದ್ದಾರೆ. ಜಗಳ ನಿಲ್ಲಿಸಲು ಹೋದಾಗ ಇಬ್ಬರಿಗೂ ಚಾಕುವಿನಿಂದ ಇರಿದಿದ್ದಾರೆ.
ಹುಡುಗಿ ಹುಡುಗನ ಜೊತೆ ಓಡಿ ಹೋಗುವಾಗ ಇವರಿಬ್ಬರು ಬೆಂಬಲ ನೀಡಿದ್ದಾರೆಂದು ದಾಳಿ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಹೆಚ್ಚಿನ ತನಿಖೆ ಮುಂದುವರಿದಿದೆ.



