ಬೆಳಗಾವಿ:- ಮೊಟ್ಟೆ ತಿನ್ನಲು ಸೇಫ್ ಆಗಿದ್ದು, ಇದರಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ತೆರೆ ಎಳೆದಿದ್ದಾರೆ. ಮೊಟ್ಟೆ ಸೇವನೆ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕಳೆದ ವರ್ಷ 147 ಮೊಟ್ಟೆ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಪರೀಕ್ಷಿಸಿದ ಮಾದರಿಗಳಲ್ಲಿ ಕೇವಲ ಒಂದು ಫೇಲ್ ಆಗಿದ್ದು, ಉಳಿದವು ಉತ್ತಮವಾಗಿದ್ದವು. ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು, ಸೇವಿಸಬಹುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮೊಟ್ಟೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ಶಾಲಾ ಮಕ್ಕಳಿಗೆ ಕೊಡಬಹುದು, ತಿನ್ನಬಹುದು, ಆರೋಗ್ಯಕರವಾಗಿದೆ ಎಂದು ಸ್ಪಷ್ಟಪಡಿಸಿದರು.



