ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ ಬಾರಿಗೆ ಬೆಳಗಾವಿ ಚಳಿಗಾಲದ ಅಧಿವೇಶನ ವೀಕ್ಷಣೆ ಮಾಡಲು ತೆರಳಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಮಹಿಳಾ ಮುಖಂಡರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ಅಧಿವೇಶನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಮುಂದೆ ಮಹಿಳೆಯರಿಗೆ ಇಲ್ಲೇ ಕುಳಿತು ಮಾತನಾಡುವ ಅವಕಾಶ ಸಿಗುತ್ತದೆ. ಶೇ. 33 ಮೀಸಲು ಬಂದರೆ 75 ಮಹಿಳಾ ಶಾಸಕರು ಸದನದಲ್ಲಿ ಇರುತ್ತೀರಿ, ಮಹಿಳಾ ಕಾಂಗ್ರೆಸ್ನ ವಿನೂತನ ಕಾರ್ಯ ಮೆಚ್ಚುವಂಥದ್ದು. ಸರಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಜನರಿಗೆ ಮುಟ್ಟಿಸುವ ಕೆಲಸ ಜೊತೆಗೆ ಸರಕಾರದ ಸಾಧನೆ ವಿವರಿಸುವ ಕೆಲಸ ಮಾಡಿ ಎಂದರು.
ಈ ವೇಳೆ ವೀಕ್ಷಣೆಗೆ ತೆರಳಲು ಅವಕಾಶ ಮಾಡಿಕೊಟ್ಟ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿಯಾಗಿ ಶುಭ ಕೋರಿದರು. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಮರೇಗೌಡ ಬಯ್ಯಾಪೂರ ವಿನೂತನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಹಕಾರ ನೀಡಿದರು. ಡಿಸಿಸಿ ಸದಸ್ಯೆ ಸುಮಂಗಲಾ ನಾಯಕ, ಡಿಎಂಸಿ ಸದಸ್ಯೆ ದೀಪಾ ರಾಠೋಡ, ಆರೋಗ್ಯ ಇಲಾಖೆ ಡಿಐಎಂಸಿ ಸದಸ್ಯೆ ರೇಷ್ಮಾ ಖಾಜಾವಲಿ, ಕಾರಟಗಿ ಬ್ಲಾಕ್ ಅಧ್ಯಕ್ಷೆ ಸೌಮ್ಯ ಕಂದಗಲ್, ಕುಷ್ಟಗಿ ಬ್ಲಾಕ್ ಅಧ್ಯಕ್ಷೆ ಶಕುಂತಲಾ ಹಿರೇಮಠ, ಗ್ಯಾರಂಟಿ ಸದಸ್ಯರಾದ ಪದ್ಮಾ ಬಸ್ತಿ, ರೇಣುಕಮ್ಮ ಕಾರಟಗಿ, ತಾವರಗೇರಾ, ಪ.ಪಂ ಸದಸ್ಯೆ ಬೇಬಿ ರೇಖಾ, ಭಾಗ್ಯನಗರ ಪ.ಪಂ ಸದಸ್ಯೆ ಸವಿತಾ ಗೋರಂಟ್ಲಿ, ಆಶ್ರಯ ಸಮಿತಿ ಸದಸ್ಯರಾದ ಕಾವೇರಿ ರ್ಯಾಗಿ, ಶಿಲ್ಪಾ, ಮಹಿಳಾ ಕಾಂಗ್ರೆಸ್ ಮುಖಂಡರಾದ ಸೌಭಾಗ್ಯ ಗೊರವರ, ರೇಣುಕಾ ಪುರದ, ಯಶೋಧಾ ಮರಡಿ, ಗಂಗಮ್ಮ ನಾಯಕ, ಚನ್ನಮ್ಮ, ಪ್ರಮೀಳಾ, ಅನಿತಾ ಇತರರು ಇದ್ದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ ಮಾತನಾಡಿ, ನಾವೆಲ್ಲ ಸಂಘಟಿತರಾಗಿ ಮುಂದೆ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಬರುವಂತೆ ಮಾಡಬೇಕಿದೆ. ಜಿಲ್ಲೆಯ ಐದೂ ವಿಧಾನಸಭೆಯಲ್ಲಿ ನಮ್ಮ ಶಾಸಕರು ಇರಬೇಕು. ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಮ್ಮ ಗುರಿಯಾಗಿದ್ದು, ಹೆಚ್ಚಿನ ಸ್ಥಾನ ಗೆಲ್ಲುವಂತೆ ಕೆಲಸ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ. ಈಗಾಗಲೇ ಸಾಕಷ್ಟು ಮಹಿಳೆಯರಿಗೆ ಸ್ಥಳೀಯ ನಾಮ ನಿರ್ದೇಶನಗಳಲ್ಲಿ ಅವಕಾಶ ಕೊಟ್ಟಿದ್ದಾರೆ. ಬರುವ ದಿನಗಳಲ್ಲಿ ರಾಜ್ಯಮಟ್ಟದ ಅವಕಾಶಗಳೂ ಸಿಗುತ್ತದೆ ಎಂದರು.



