ಶಿವಮೊಗ್ಗ:- ಜಿಲ್ಲೆಯ ಸಾಗರ ತಾಲೂಕಿನ ಚಂದ್ರಮಾವಿನ ಕೊಪ್ಪಲು ಸಮೀಪ ತಾಳಗುಪ್ಪದಿಂದ ಮೈಸೂರಿನತ್ತ ಸಾಗುತ್ತಿದ್ದ ರೈಲ್ವೇ ಹಳಿಗೆ ಜಿಗಿದು ವ್ಯಕ್ತಿಯೊಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ರೈಲು ಸ್ಥಳಕ್ಕೆ ಸಮೀಪಿಸುತ್ತಿದ್ದಂತೆ ಹಳಿಗಳ ಮೇಲೆ ಜಿಗಿದ ವ್ಯಕ್ತಿಯನ್ನು ಗಮನಿಸಿದ ಲೋಕೋ ಪೈಲಟ್ ಸಮಯಪ್ರಜ್ಞೆ ಪ್ರದರ್ಶಿಸಿ ತಕ್ಷಣವೇ ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದಾರೆ. ಪರಿಣಾಮ ದೊಡ್ಡ ಅನಾಹುತ ತಪ್ಪಿದೆ.
ನಂತರ ಲೋಕೋ ಪೈಲಟ್ ರೈಲಿನಿಂದ ಇಳಿದು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು. ಸ್ಥಳದಲ್ಲಿದ್ದ ಖಾಸಗಿ ಆಂಬ್ಯುಲೆನ್ಸ್ ಮಾಲೀಕ ಗಂಗಾಧರ್ ಅವರ ಸಹಕಾರದಿಂದ ಗಾಯಾಳುವನ್ನು ತಕ್ಷಣ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು.
ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.



