ವಿಜಯಸಾಕ್ಷಿ ಸುದ್ದಿ, ಬಾಗಲಕೋಟ: ಇಲ್ಲಿನ ಐತಿಹಾಸಿಕ ಸ್ಥಳ ಐಹೊಳೆ ಹತ್ತಿರದ ಸುಕ್ಷೇತ್ರ ಕಲಾಪೋಷಕರ ಮಠ ಸಿದ್ಧನಕೊಳ್ಳದ ಸಿದ್ಧಶ್ರೀ ರಾಷ್ಟ್ರೀಯ ಉತ್ಸವ-2026 ಜ. 14ರಿಂದ 16ರವರೆಗೆ ಮೂರು ದಿನಗಳ ಕಾಲ ಜರುಗಲಿದ್ದು, ಜ.15ರಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಹುನಗುಂದ ಕ್ಷೇತ್ರದ ಶಾಸಕರಾದ ಡಾ. ವಿಜಯಾನಂದ ಕಾಶಪ್ಪನವರ ಜಾತ್ರಾ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಧರ್ಮಾಧಿಕಾರಿಗಳಾದ ಡಾ. ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಸಿದ್ಧಶ್ರೀ ಉತ್ಸವದಲ್ಲಿ ಸಹಸ್ರಾರು ಭಕ್ತರು ಸೇರುತ್ತಿದ್ದು, ಸಂಗೀತ, ನೃತ್ಯ, ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳು ನೆರವೇರುತ್ತವೆ. ರಾಜ್ಯ, ಹೊರರಾಜ್ಯಗಳ ವಿವಿಧ ಸಾಧಕರು, ಪ್ರತಿಭಾನ್ವಿತ, ಉದಯೋನ್ಮುಖ ಕಲಾ ಪ್ರತಿಭೆಗಳಿಗೂ ವೇದಿಕೆ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಜ.15ರಂದು ಹಮ್ಮಿಕೊಳ್ಳಲಾಗಿದೆ. ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಇನ್ನೂ ಬಿಡುಗಡೆಯಾಗದ ತಮ್ಮ 2025ರಲ್ಲಿ ನಿರ್ಮಾಣವಾದ, ಆಗುತ್ತಿರುವ ಹೊಸ ಚಲನಚಿತ್ರಗಳ, ಟೆಲಿಫಿಲ್ಮ್, ಕಿರುಚಿತ್ರಗಳ ಟ್ರೇಲರ್, ಟೀಸರ್ ಮತ್ತು ಪೋಸ್ಟರ್ಗಳನ್ನು ಚಿತ್ರೋತ್ಸವದಲ್ಲಿ ಬಿಡುಗಡೆ ಮಾಡಬಹುದು.
ಯಾವುದೇ ಪ್ರವೇಶ ಶುಲ್ಕಗಳಿಲ್ಲದೆ ಉಚಿತ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸಿದ ಚಲನಚಿತ್ರ ತಂಡಗಳಿಗೆ ಅಭಿನಂದನಾ ಪತ್ರ, ಸ್ಮರಣಿಕೆ, ಕಿರುಚಿತ್ರ ತಂಡಗಳಿಗೆ ಅಭಿನಂದನಾ ಪತ್ರಗಳನ್ನು ನೀಡಲಾಗುತ್ತದೆ. ಆಸಕ್ತರು ಡಿಸೆಂಬರ್ 31ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಬಂದವರಿಗೆ ಅವಕಾಶವಿಲ್ಲ. ಶ್ರೀಗಳ ಮತ್ತು ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ. ಆಯ್ಕೆಯಾದವರಿಗೆ ನಂತರ ತಿಳಿಸಲಾಗುತ್ತದೆ. ತಮ್ಮ ಟೀಸರ್, ಟ್ರೇಲರ್, ಪೋಸ್ಟರ್ಗಳನ್ನು ಡಾ. ಪ್ರಭು ಗಂಜಿಹಾಳ-ವಾಟ್ಸಪ್ ನಂ-9448775346 ಇಲ್ಲಿಗೆ ಕಳಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಲನಚಿತ್ರೋತ್ಸವ ವಿಭಾಗದ ಡಾ. ಪ್ರಭು ಗಂಜಿಹಾಳ-ಮೊ-9448775346, ಡಾ. ವೀರೇಶ ಹಂಡಿಗಿ-ಮೊ-9060933596, ವೀರೇಶ ಐಹೊಳೆ-ಮೊ-7026062364, ಸಂಗನಗೌಡ್ರು ಕುರುಡಗಿ-ಮೊ-8861811128, ಲೋಕೇಶ ವಿದ್ಯಾಧರ ಮೊ-8762310399 ಇವರನ್ನು ಸಂಪರ್ಕಿಸಬಹುದು ಎಂದು ಶ್ರೀಗಳು ತಿಳಿಸಿದ್ದಾರೆ.



