ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಚುಂಚನೂರ ಗ್ರಾಮದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಕಾಲುವೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಗ್ರಾಮಸ್ಥರು ಮತ್ತು ಪೊಲೀಸರ ಶೋಧ ಕಾರ್ಯದ ಮೂಲಕ ಅವರ ದೇಹವನ್ನು ಹೊರತೆಗೆಯಲಾಗಿದೆ.
ಮೃತ ಬಾಲಕರು ಹತ್ತು ವರ್ಷದ ಬಸವರಾಜ್ ಸೋಮನವರ್ ಮತ್ತು ಹನುಮಂತ ಹಗೆದ್ ಎಂದು ಗುರುತಿಸಲಾಗಿದೆ. ಇಬ್ಬರು ಕಾಲುವೆಯಲ್ಲಿ ಈಜಲು ಹೋಗಿರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಿದ್ದಾರೆ.
ಘಟನೆ ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳೀಯರು ಶೋಧ ನಡೆಸಿ ಬಾಲಕರ ಮೃತ ದೇಹವನ್ನು ಹೊರತೆಗೆಯಲು ಸಹಕರಿಸಿದ್ದಾರೆ. ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.



