ಬೆಂಗಳೂರು:- ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
ಮೃತ ಯುವಕನನ್ನು 23 ವರ್ಷದ ಅರವಿಂದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳೀಯ ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



