ವಿಜಯಸಾಕ್ಷಿ ಸುದ್ದಿ, ಗದಗ
ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಟ್ರಜರಿಯಲ್ಲಿಟ್ಟಿದ್ದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಕಳ್ಳವು ಮಾಡಿದ ಘಟನೆ ಗದಗ ಕೆಎಚ್ ಬಿ ಕಾಲೋನಿಯಲ್ಲಿ ನಡೆದಿದೆ.
ಬ್ಯಾಂಕ್ ಉದ್ಯೋಗಿ ಸುರೇಂದ್ರ ಗುಡಿ ಅವರು ಬೇರೆ ಊರಿಗೆ ಹೋಗಿದ್ದಾಗ, ಮನೆಯಲ್ಲಿ ಯಾರು ಇರದ ಸುಳಿವು ಅರಿತ ಕಳ್ಳರು ಮನೆಗೆ ಕನ್ನ ಹಾಕಿದ್ದು, 6 ಗ್ರಾಂ ಚಿನ್ನ, 610 ಗ್ರಾಂ ಬೆಳ್ಳಿ ಆಭರಣಗಳು ಹಾಗೂ 25 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
ಈ ಕುರಿತು ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



