HomeDharwadಉತ್ಸವವನ್ನು ಯಶಸ್ವಿಯಾಗಿಸಲು ಕಾರ್ಯೋನ್ಮುಖರಾಗಿ: ಎಸ್.ಆರ್. ಪಾಟೀಲ್

ಉತ್ಸವವನ್ನು ಯಶಸ್ವಿಯಾಗಿಸಲು ಕಾರ್ಯೋನ್ಮುಖರಾಗಿ: ಎಸ್.ಆರ್. ಪಾಟೀಲ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಂಕೇತಿಸುವ ಪಂಚ ಗ್ಯಾರಂಟಿ ಉತ್ಸವ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯಲ್ಲಿ 2026ರ ಜನವರಿ 5ರಂದು ಅದ್ಧೂರಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ವಿಭಾಗೀಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್ ತಿಳಿಸಿದರು.

ಅವರು ಮಂಗಳವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ಯಾರಂಟಿ ಉತ್ಸವದ ಯಶಸ್ವಿಗಾಗಿ ಜಿಲ್ಲಾಮಟ್ಟದ ಅಧಿಕಾರಿಗಳಿರುವ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿಯ ಪ್ರತಿಯೊಬ್ಬ ಸದಸ್ಯರೂ ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈ ಉತ್ಸವವು ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿರುವುದರ ಪ್ರತಿಬಿಂಬವಾಗಬೇಕು ಎಂದು ಹೇಳಿದರು.

ಜಿಲ್ಲೆಯಾದ್ಯಂತ ಇರುವ ಎಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಉತ್ಸವದಲ್ಲಿ ಭಾಗವಹಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಯೋಜನೆಗಳ ಅನುಷ್ಠಾನದಲ್ಲಿ ಫಲಾನುಭವಿಗಳಿಗೆ ಅಥವಾ ಅಧಿಕಾರಿಗಳಿಗೆ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ತೊಡಕುಗಳಿದ್ದರೆ, ಅವುಗಳನ್ನು ತಕ್ಷಣವೇ ಗಮನಕ್ಕೆ ತರಬೇಕು. ಅಂತಹ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ವೇದಿಕೆಯಲ್ಲಿ ಧಾರವಾಡ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್.ಪಾಟೀಲ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ ಉಪಸ್ಥಿತರಿದ್ದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಕಮಿಟಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚ ಗ್ಯಾರಂಟಿಗಳಿಂದ ಜನರ ಜೀವನದಲ್ಲಿ ಆದ ಬದಲಾವಣೆಗಳ ಜನರಿಗೆ ಮನವರಿಕೆ ಮಾಡಲು, ಪ್ರತಿ ಯೋಜನೆಗೆ ಒಂದರಂತೆ ಐದು ವಿಶೇಷ ಕಿರುಚಿತ್ರಗಳನ್ನು ಸಿದ್ಧಪಡಿಸಬೇಕು. ಅಲ್ಲದೆ, ಫಲಾನುಭವಿಗಳ ನೈಜ ಯಶೋಗಾಥೆಗಳನ್ನು ಸಾಕ್ಷ್ಯಚಿತ್ರಗಳ ಮೂಲಕ ಪ್ರದರ್ಶಿಸಬೇಕು ಎಂದು ಎಸ್.ಆರ್. ಪಾಟೀಲ್ ಅಧಿಕಾರಿಗಳಿಗೆ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!