ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ನಿವಾಸಿ, ಗಣ್ಯರಾದ ಶಿವರುದ್ರಪ್ಪ ಎಸ್.ಕಳಸಾಪೂರ (72) ಅವರು ಗುರುವಾರ ಮಧ್ಯಾಹ್ನ ನಿಧನರಾದರು. ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಳಗವನ್ನು ಬಿಟ್ಟು ಅಗಲಿದ್ದಾರೆ.
ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತರ ನೇತ್ರದಾನಕ್ಕೆ ಪ್ರೇರಣೆ ನೀಡಿದರು. ಕುಟುಂಬದವರ ಒಪ್ಪಿಗೆಯ ಮೇರೆಗೆ ಹುಬ್ಬಳ್ಳಿ ಕಣ್ಣಿನ ಆಸ್ಪತ್ರೆಯ ತಜ್ಞರ ತಂಡವು ನೇತ್ರದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿತು.
ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ರಾಜು ವೇರ್ಣೆಕರ, ಕಾರ್ಯದರ್ಶಿ ರಾಜಣ್ಣ ಮಲ್ಲಾಡದ, ಖಜಾಂಚಿ ರೇಣುಕಪ್ರಸಾದ ಹಿರೇಮಠ, ರಮೇಶ ಶಿಗ್ಲಿ, ಪ್ರಶಾಂತ ಅಳಗುಂದಿ, ಡಾ. ಗುರುಪ್ರಸಾದ, ಡಾ. ಶ್ವೇತಾ ಸಂಕನೂರ ಮುಂತಾದವರಿದ್ದರು.
ವ್ಯಕ್ತಿಯ ನಿಧನದ ಬಳಿಕ ಕುಟುಂಬದವರು ಮೃತ ವ್ಯಕ್ತಿಯ ನೇತ್ರಗಳನ್ನು ದಾನ ಮಾಡುವ ಮೂಲಕ ಇನ್ನೊಬ್ಬರಿಗೆ ದೃಷ್ಟಿ ಬರುವಂತಾಗಲು ಮಾನವೀಯ ಕಾರ್ಯಕ್ಕೆ ಮುಂದಾಗಬೇಕೆಂದು ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಜಣ್ಣ ಮಲ್ಲಾಡದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.



