ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ 92 ಹೊರಗುತ್ತಿಗೆ ಪೌರಕಾರ್ಮಿಕರನ್ನು, ವಾಹನ ಚಾಲಕರನ್ನು ಖಾಯಂ ಮಾಡುವಂತೆ ಜೈ ಭೀಮ್ ಸಂಘರ್ಷ ಸಮಿತಿ ಗದಗ ಜಿಲ್ಲಾ ಗದಗ ಜಿಲ್ಲಾಧ್ಯಕ್ಷ ಗಣೇಶ ವಾಯ್.ಹುಬ್ಬಳ್ಳಿ, ಉಪಾಧ್ಯಕ್ಷ ರಾಜೇಶ ಶೆಟ್ಟರ್ ನೇತೃತ್ವದಲ್ಲಿ ಗದಗ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಗಣೇಶ ಹುಬ್ಬಳ್ಳಿ ಮಾತನಾಡಿ, ಹೊರಗುತ್ತಿಗೆ ಆಧಾರದ ಮೇಲೆ ಸುಮಾರು 10 ವರ್ಷಗಳಿಂದ ಗದಗ-ಬೆಟಗೇರಿ ನಗರಸಭೆಯಲ್ಲಿ ಹೊರಗುತ್ತಿಗೆ ಪೌರಕಾರ್ಮಿಕರಾಗಿ 92 ಜನರು ಸೇರಿದಂತೆ ಕಸ ಸಾಗಾಣಿಕೆಯ ವಾಹನ ಚಾಲಕರಾಗಿ ದುಡಿಯುತ್ತಿದ್ದಾರೆ. ಇವರೆಲ್ಲರೂ ನಗರದ ಸ್ವಚ್ಛತೆಗಾಗಿ ದುಡಿಯುತ್ತಿದ್ದು, ಎಲ್ಲರನ್ನೂ ಮಾನವೀಯತೆ ಮೇಲೆ ರಾಜ್ಯ ಸರ್ಕಾರ ನೇರ ನೇಮಕಾತಿ ಮಾಡಿ ನಮ್ಮ ಜೀವನಕ್ಕೆ ಭದ್ರತೆ ಒದಗಿಸಿ ಕುಟುಂಬ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಜೈ ಭೀಮ್ ಸಂಘರ್ಷ ಸಮಿತಿಯ ಗದಗ ಜಿಲ್ಲಾಧ್ಯಕ್ಷ ಗಣೇಶ ವಾಯ್.ಹುಬ್ಬಳ್ಳಿ, ಉಪಾಧ್ಯಕ್ಷರಾದ ಮಂಜುನಾಥ ಎಫ್.ತೌಜಲ್, ಜೈ ಭೀಮ್ ಸಂಘರ್ಷ ಸಮಿತಿಯ ರೋಣ ತಾಲೂಕಾಧ್ಯಕ್ಷರಾದ ಬಸವರಾಜ ಬದಾಮಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ರಾಷ್ಟ್ರೀಯ ಜೋಸೆಪ್, ಉಪಾಧ್ಯಕ್ಷ ರಾಜೇಶ ವಿ.ಶೆಟ್ಟರ್, ಯುವ ಘಟಕದ ಜಿಲ್ಲಾಧ್ಯಕ್ಷ ಇಮಾಮಹುಸೇನ ಕುನ್ನಿಬಾವಿ, ಕಾರ್ಯದರ್ಶಿ ಸಮೀರ ಅಹ್ಮದ ಕುನ್ನಿಬಾವಿ, ಯುವ ಘಟಕ ಅಧ್ಯಕ್ಷ ಪ್ರೇಮಕುಮಾರ ಹುಬ್ಬಳ್ಳಿ, ಮಂಜುನಾಥ ಸುಂಕದ, ಶ್ರೀಕಾಂತ ಹಲವಾಗಲಿ, ರಮೇಶ ರಾಲದೊಡ್ಡಿ, ಹೇಮಂತ ಹುಬ್ಬಳ್ಳಿ, ವಿರೂಪಾಕ್ಷ ಗೌಡರ, ಗಿರೀಶ ಚಳಗೇರಿ, ರಫೀಕ ನವಲಗುಂದ, ಫರದೀನ ಕಾಟಾಪುರ, ಮಲ್ಲೇಶ ಮೇಳದಾಳಮಠ ಉಪಸ್ಥಿತರಿದ್ದರು.



