HomeKarnataka Newsಹುಬ್ಬಳ್ಳಿ| ಬಟ್ಟೆ ಬಿಚ್ಚಿ ಬಿಜೆಪಿ ಕಾರ್ಯಕರ್ತೆಯನ್ನು ಥಳಿಸಿದ್ರಾ ಕೇಶ್ವಾಪುರ ಠಾಣೆ ಪೊಲೀಸರು!?

ಹುಬ್ಬಳ್ಳಿ| ಬಟ್ಟೆ ಬಿಚ್ಚಿ ಬಿಜೆಪಿ ಕಾರ್ಯಕರ್ತೆಯನ್ನು ಥಳಿಸಿದ್ರಾ ಕೇಶ್ವಾಪುರ ಠಾಣೆ ಪೊಲೀಸರು!?

For Dai;y Updates Join Our whatsapp Group

Spread the love

ಹುಬ್ಬಳ್ಳಿ:- ನಗರದ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ.

ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿ ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ ಅಲಿಯಾಸ್​​ ವಿಜಯಲಕ್ಷ್ಮೀ ಈ ಗಂಭೀರ ಆರೋಪ ಮಾಡಿದ್ದಾರೆ. ಸುಜಾತಾ ಹಂಡಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಾಂಗ್ರೆಸ್ ಕಾರ್ಪೊರೇಟರ್​ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರು. ಅದೇ ದೂರಿನ ವಿಚಾರವಾಗಿ ಪೊಲೀಸರು ದರ್ಪ ನಡೆಸಿದ್ದಾರೆ ಎಂದು ದೂರಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭ ಅಧಿಕಾರಿಗಳ ಜೊತೆ ಸುಜಾತಾ ಹಂಡಿ ತೆರಳಿದ್ದು, ಈ ವೇಳೆ ಸುವರ್ಣ ಕಲ್ಲಕುಂಟ್ಲಾ ಮತ್ತು ಅವರ ಬೆಂಬಲಿಗರು ಗಲಾಟೆ ನಡೆಸಿದ್ದರು. ಘಟನೆ ಸಂಬಂಧ ಕೇಶ್ವಾಪುರ ಠಾಣೆಗೆ ದೂರು, ಪ್ರತಿದೂರು ದಾಖಲಾಗಿತ್ತು. ಕಾರ್ಪೊರೇಟರ್​ ದೂರು ಆಧರಿಸಿ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಬಂಧನ ವಿರೋಧಿಸಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಕೂಗಾಡಿದ್ದರು.

ಈ ವೇಳೆ ವಿವಸ್ತ್ರಗೊಳಿಸಿ ಕೇಶ್ವಾಪುರ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಸುಜಾತಾ ಹಂಡಿ‌ ಕೆಲ ವರ್ಷಗಳ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಇವರ ಮೇಲೆ ಖಾಕಿ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!