HomeKarnataka Newsಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ

ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ

For Dai;y Updates Join Our whatsapp Group

Spread the love

ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿ ಖಜಾನೆಯಿಂದ ಹಣ ಎತ್ತಿಕೊಂಡು ಹೋಗುತ್ತಿದ್ದರು. ಅದು ತಪ್ಪಲಿದೆ ಎಂದರು. ಅದಕ್ಕಾಗಿ ಹೊಟ್ಟೆ ಉರಿಯಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ನುಡಿದರು.

ಗಾಂಧಿ ಹೆಸರನ್ನು ಅಳಿಸಿದವರು ಯಾರು ಎಂಬುದಕ್ಕೆ ಉದಾಹರಣೆಗಳನ್ನು ನೀಡಿದ ಅವರು, ರಾಜ್ಯದಲ್ಲಿ 25 ಯೋಜನೆಗಳು ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹೆಸರಿನಲ್ಲಿವೆ. ಶೈಕ್ಷಣಿಕ ಸಂಸ್ಥೆಗಳಲ್ಲಿ 55 ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹೆಸರಿನಲ್ಲಿ 21 ಮತ್ತು ನೆಹರೂ ಹೆಸರಿನಲ್ಲಿ 22 ಇವೆ ಎಂದು ತಿಳಿಸಿದರು.

ಪ್ರತಿಯೊಂದು ಕ್ರೀಡಾಕೂಟದಲ್ಲೂ ರಾಜೀವ್ ಗಾಂಧಿ, ರಾಹುಲ್ ಗಾಂಧಿ ಹೆಸರು, ಇಂದಿರಾ ಗಾಂಧಿ ಹೆಸರು ಇಟ್ಟುಕೊಂಡು ಇವರು ಜನರಿಗೆ ಮೋಸ ಮಾಡಿ ನಿಜವಾದ ಗಾಂಧಿಯನ್ನು ಮರೆತುಬಿಟ್ಟವರು ಎಂದು ಟೀಕಿಸಿದರು. ಹೊಸದಾಗಿ ನರೇಗಾದಡಿ ಎಲ್ಲ ವರ್ಗದವರಿಗೂ ಅವಕಾಶ ಇದೆ. ಯಾರು ಬೇಕಾದರೂ ಬರಬಹುದು. ಹಾಗೆಂದು ಶ್ರೀಮಂತ ವರ್ಗದವರು ಕೂಲಿ ಕೆಲಸಕ್ಕೆ ಬರುವುದಿಲ್ಲ ಎಂದು ವಿವರಿಸಿದರು.

ಗಾಂಧೀಜಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಡಾ. ಅಂಬೇಡ್ಕರರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರರು ಮೃತಪಟ್ಟಾಗ ಅವರ ಸಮಾಧಿಗೆ ಆರಡಿ ಮೂರಡಿ ಜಾಗವನ್ನೂ ಕೊಡಲಿಲ್ಲ. ಅಪಾರ ಪಾಂಡಿತ್ಯ, ಜ್ಞಾನವಿದ್ದ ಡಾ. ಅಂಬೇಡ್ಕರರಿಗೆ ಅವರ ಜೀವಿತ ಕಾಲದಲ್ಲಿ ಭಾರತರತ್ನ ಕೊಡಲಿಲ್ಲ. ಅವರ ಮನೆ ಮಂದಿಗೆಲ್ಲ ತೆಗೆದುಕೊಂಡರು. ಈ ದೇಶಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರರಿಗೆ ಕೊಡಲಿಲ್ಲ ಎಂಬುದನ್ನು ನಾವು ಹೇಳಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!