ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಂಗನವಾಡಿಗಳು ಮಗುವಿನ ಶಿಕ್ಷಣದ ಮೊದಲ ಮೆಟ್ಟಿಲುಗಳಾಗಿದ್ದು, ಶಿಕ್ಷಣದ ಜೊತೆಗೆ ಆರೋಗ್ಯ ಸೇವೆ ನೀಡುವ ಮೈಲಿಗಲ್ಲುಗಳಾಗಿವೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅವರು ಸಮೀಪದ ಗೊಜನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರ ಸಂಖ್ಯೆ-43ರ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆನ್ನುವದು ಪಾಲಕರ ಇಚ್ಛೆಯಾಗಿರುತ್ತದೆ. ಅದಕ್ಕಾಗಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಎಲ್ಲ ಕಡೆಗಳಲ್ಲಿ ಸ್ಥಾಪಿಸಿದ್ದು, ಸಾವಿರಾರು ಮಕ್ಕಳು ಇದರಲ್ಲಿ ಕಲಿಯುತ್ತಿದ್ದಾರೆ. ಇಲ್ಲಿ ಊಟ, ಉಪಹಾರ ಉಚಿತವಾಗಿ ನೀಡುವದರ ಜೊತೆಗೆ ಸಾಮಾನ್ಯವಾಗಿ ಮುಂದೆ ಅವರ ಶಿಕ್ಷಣಕ್ಕೆ ಅನುಕೂಲವಾಗುವ ವಿದ್ಯೆಯನ್ನು ನೀಡಲಾಗುತ್ತದೆ. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಅಂಗನವಾಡಿ ಶಿಕ್ಷಕಿಯರು, ಸಹಾಯಕರು ನಿರಂತರ ಸೇವೆ ಸಲ್ಲಿಸುತ್ತಿದ್ದು, ಮಕ್ಕಳ ಆರೋಗ್ಯ, ಉತ್ತಮ ಆಹಾರ ಒದಗಿಸುವತ್ತ ಅಂಗನವಾಡಿ ಶಿಕ್ಷಕರು, ಸಹಾಯಕರು ವಿಶೇಷ ಆದ್ಯತೆ ನೀಡಬೇಕು.
ಪಾಲಕರು ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು. ಗೊಜನೂರು ಗ್ರಾಮದಲ್ಲಿ ಬಹುದಿನಗಳಿಂದ ಬೇಡಿಕೆಯಲ್ಲಿದ್ದ ಅಂಗನವಾಡಿ ಕೇಂದ್ರ ಸಂಖ್ಯೆ 43ರ ನೂತನ ಕಟ್ಟಡ ಇದೀಗ ಪ್ರಾರಂಭವಾಗಿದ್ದು, ಕಟ್ಟಡದಲ್ಲಿ ಸ್ವಚ್ಛತೆ ಮಕ್ಕಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ಕರೆನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಮಂಜುನಾಥ ಕಾಳೆ, ಉಪಾಧ್ಯಕ್ಷ ಮಹಾಂತಗೌಡ ಪಾಟೀಲ, ಸಿಡಿಪಿಓ ಮೃತ್ಯುಂಜಯ ಗುಡ್ಡದನ್ವೇರಿ, ಶಿರಹಟ್ಟಿ ಬಿಜೆಪಿ ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ರಮೇಶ ದನದಮನಿ, ಚಂದ್ರಗೌಡ ಪಾಟೀಲ, ನಿಂಗನಗೌಡ ಪಾಟೀಲ, ಮಂಜುನಾಥ ಕಣವಿ, ವೀರಭದ್ರಪ್ಪ ವಡಕಣ್ಣವರ, ಗಂಗಾಧರ ಮೆಣಸಿನಕಾಯಿ, ಶಕ್ತಿ ಕತ್ತಿ, ಭೀಮಣ್ಣ ಯಂಗಾಡಿ, ಅಂಗನವಾಡಿ ಮೇಲ್ವಿಚಾರಕಿ ಗೀತಾ ಮುಳುಗುಂದ, ಎನ್ಪಿಎಸ್ ನೌಕರ ಸಂಘದ ತಾಲೂಕಾಧ್ಯಕ್ಷ ಎಫ್.ಎಸ್. ತಳವಾರ, ಅಂಗನವಾಡಿ ಕಾರ್ಯಕರ್ತೆಯರಾದ ಬಸವಣೆವ್ವ ಪಾಟೀಲ, ಸುಧಾ ಗುಂಡೆನಹಳ್ಳಿ, ಗಿರಿಜಾ ಪೂಜಾರ, ನಾಗಮ್ಮ ಮುದಗಲ್, ಮಕ್ಕಳ ಜಾಗೃತಿ ಸಂಸ್ಥೆ ಸಿಬ್ಬಂದಿಗಳಾದ ಸಂಜೀವ ರೆಡ್ಡಿ, ಕಾತುನಬಿ ಮಸೂದಿ, ಸಂಜೀವ, ಸಾವಿತ್ರಿ ಕಾಮತ ಮುಂತಾದವರಿದ್ದರು.



