ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಕ್ಷಕರಿಗೆ ಟಿಇಟಿ ಕಡ್ಡಾಯ ನಿಯಮ ಸಡಿಲಗೊಳಿಸಬೇಕು ಎಂಬ ಬೇಡಿಕೆಯೂ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದು, ಅದರಂತೆ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಶಿಕ್ಷಕರು ಗುರುವಾರ ಕಪ್ಪು ಪಟ್ಟಿ ಧರಿಸಿದ ಶಿಕ್ಷಕರು ಪಾಠ ಪ್ರವಚನಗಳನ್ನು ನಡೆಸಿದರು.
ಶಿಕ್ಷಕರಿಗೆ ಟಿಇಟಿ ಕಡ್ಡಾಯ ನಿಯಮ ಸಡಿಲಗೊಳಿಸಬೇಕು ಎಂಬ ಪ್ರಮುಖ ಬೇಡಿಕೆ ಸುಪ್ರೀಂ ಕೋರ್ಟ್ ಆದೇಶ ಪುನರ್ ಪರಿಶೀಲನೆ ಸಲ್ಲಿಸಿ ಕಾನೂನು ಹೋರಾಟ ಒಂದು ಕಡೆಯಾದರೆ, ಮತ್ತೊಂದು ಕಡೆ ಸರ್ಕಾರ ಹಾಲಿ ಕರ್ತವ್ಯ ನಿರತ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂಬುದು ಶಿಕ್ಷಕರ ಬೇಡಿಕೆಯಾಗಿದ್ದು, ಇದರ ಜೊತೆಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು, ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕಾತಿ ಕೈಬಿಟ್ಟು ಖಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು, ದೇಶಾದ್ಯಂತ ಎಲ್ಲಾ ಶಿಕ್ಷಕರಿಗೂ ಏಕರೂಪದ ವೇತನ ನೀಡಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಶಿಕ್ಷಕರು ತರಗತಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪಾಠ ಪ್ರವಚನ ಮಾಡಿ ಪ್ರತಿಭಟನೆ ನಡೆಸಿದರು.



