ವಿಜಯಸಾಕ್ಷಿ ಸುದ್ದಿ, ಡಂಬಳ: ಜನಪರ ಕಾರ್ಯಗಳೊಂದಿಗೆ ರೋಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ಶಾಸಕ ಜಿ.ಎಸ್. ಪಾಟೀಲರ ಪುತ್ರ, ರೋಣ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಅಖಿಲ ಭಾರತ ಲಿಂಗಾಯತ ಮಹಾಸಭಾ ಕಾರ್ಯನಿರ್ವಾಹಕ ಸಮಿತಿ ಸದಸ್ಯರೂ ಆಗಿರುವ ಸಂಗನಗೌಡ (ಮಿಥುನ್) ಜಿ.ಪಾಟೀಲರು ಈಗ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಯುವ ರಾಜಕಾರಣಿ.
ಮಿಥುನ್ ಪಾಟೀಲರ ಜನ್ಮದಿನದ ಪ್ರಯುಕ್ತ ಎಂ.ಜಿ.ಪಿ ಯುವ ಬ್ರಿಗೇಡ್, ಗದಗ ಜಿಲ್ಲಾ ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾ ಪ್ರೇಮಿಗಳಿಗಾಗಿ ಪಟ್ಟಣದ ಸೇಲ್ಸ್ ಸೊಸೈಟಿಯಲ್ಲಿ ಪ್ರೋ ಕಬಡ್ಡಿ ವೈಭವ ಹಮ್ಮಿಕೊಳ್ಳಲಾಗಿದೆ. ನಾಲ್ಕು ಮಹಿಳಾ ತಂಡಗಳು ಸಹ ಪ್ರೋ ಕಬಡ್ಡಿಯಲ್ಲಿ ಪಾಲ್ಗೊಳ್ಳಲಿವೆ. ಪಟ್ಟಣದ ಸೋಮೇಶ್ವರ ದೇವಸ್ಥಾನದ ಆವರಣ ಸ್ವಚ್ಛತಾ ಕಾರ್ಯಕ್ರಮ, ವಾ.ಕ.ರ.ಸಾ ಸಂಸ್ಥೆಯಲ್ಲಿ ಚಿನ್ನದ ಪದಕ ಪಡೆದ ಚಾಲಕರಿಗೆ ಹಾಗೂ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ರೋಣ ನಗರದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಜರುಗಲಿದೆ. ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಕಾರ್ಯಕ್ರಮವನ್ನು ಅವರ ಅಭಿಮಾನಿಗಳು ರೋಣ ಕ್ಷೇತ್ರಾದ್ಯಂತ ಹಮ್ಮಿಕೊಂಡಿದ್ದಾರೆ.
ಮುಂದೊಂದು ದಿನ ಕ್ಷೇತ್ರದ ಶಾಸಕರಾಗುವ ಛಲದಿಂದ ಕ್ಷೇತ್ರದ ಜನತೆಯ ನಾಡಿ ಮಿಡಿತ ಅರಿಯುವದರೊಂದಿಗೆ ಸ್ವತಃ ಮಿಥುನ್ ಪಾಟೀಲರು ರೋಣ ಕ್ಷೇತ್ರದಲ್ಲಿ ಸಾಮಾಜಿಕ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡು ಸದಾ ಜನರ ನಾಡಿಮಿಡಿತ ಅರಿಯುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ರೋಣ ಕ್ಷೇತ್ರದಾದ್ಯಂತ ಯುವಕರಲ್ಲಿ ಜಾಗೃತಿ ಮೂಡಿಸಲು, ಸಾಂಸ್ಕೃತಿಕ, ಕ್ರೀಡಾಕೂಟಗಳನ್ನು ಹಮ್ಮಿಕೊಂಡು ಕಬಡ್ಡಿ, ವಾಲಿಬಾಲ್, ಕ್ರಿಕೆಟ್ ಮತ್ತಿತರ ಕ್ರೀಡೆಗಳಿಗೆ ನೆರವು ನೀಡಿ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಉಚಿತ ಸಿಇಟಿ ತರಬೇತಿ ಹಮ್ಮಿಕೊಂಡು ಉದ್ಯೋಗ ತರಬೇತಿ ನೀಡಿ, ಕ್ಯಾಂಪಸ್ ಉದ್ಯೋಗ ಮೇಳ ಆಯೋಜಿಸುವ ಮೂಲಕ ಯುವಕರ ಕಣ್ಮಣಿಯಾಗಿದ್ದಾರೆ.
ತಂದೆಗೆ ತಕ್ಕ ಮಗನಾಗಿ ಜನಪರ ಸೇವೆಗೆ ಹೆಸರುವಾಸಿಯಾಗಿರುವ ಮಿಥುನ್ ಜಿ.ಪಾಟೀಲ ಬಡವರ, ಮಧ್ಯಮ ವರ್ಗದವರು, ಮಹಿಳೆಯರು, ರೈತರು, ಕಾರ್ಮಿಕರಿಗೆ ಸರಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಸರಳ ಸಜ್ಜನಿಕೆ, ಮಾನವೀಯ ಮಮತೆಯನ್ನು ಮೈಗೂಡಿಸಿಕೊಂಡಿರುವ ಮಿಥುನ್ ಜಿ.ಪಾಟೀಲರು ಈ ಭಾಗದ ಯುವ ರಾಜಕಾರಣಿಗಳ ಜೊತೆ ಬೆರೆತು ಸಾಮಾಜಿಕ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.
“ಕಡು ಬಡವರ, ಮಹಿಳೆಯರ, ಯುವಕರ, ರೈತರ, ಕಾರ್ಮಿಕರ ಹಿತಕ್ಕಾಗಿ, ಸರಕಾರದ ಪಂಚ ಗ್ಯಾರಂಟಿಗಳನ್ನು ಜನತೆಗೆ ನೇರವಾಗಿ ತಲುಪಿಸಲು ಮಿಥುನ್ ಪಾಟೀಲರು ಗುರುತರವಾದ ಸೇವೆ ಸಲ್ಲಿಸುತ್ತಿದ್ದಾರೆ. ಆರೋಗ್ಯ ಚಿಕಿತ್ಸೆ, ಯುವಕರಿಗೆ ಉದ್ಯೋಗ ಕಲ್ಪಿಸಬೇಕೆಂಬ ಸೇವಾ ಮನೋಭಾವನೆ ಹೊಂದಿರುವ, ಸರ್ವ ಧರ್ಮಗಳ ಭಾವೈಕ್ಯತೆಯ ನೇತಾರ ಮಿಥುನ್ ಜಿ.ಪಾಟೀಲ್ ಆಗಿದ್ದಾರೆ”
– ಅಸಲಮ ಕೊಪ್ಪಳ.
ಸರಕಾರಿ ಪ.ಪೂ ಕಾಲೇಜಿನ
ಅಭಿವೃದ್ಧಿ ಸಮಿತಿ ಸದಸ್ಯರು, ರೋಣ.
“ಸದಾ ಜನಮುಖಿ, ಜನಾನುರಾಗಿಯಾಗಿ ರೈತರ, ಕಾರ್ಮಿಕರ, ಯುವಕರ, ವೃದ್ಧರ ಕಣ್ಣಿನ ಚಿಕಿತ್ಸೆ ಅಲ್ಲದೇ ಗ್ರಾಮೀಣ ಜನರ ಹಿತ ಕಾಪಾಡುವುದರ ಮೂಲಕ ಜನಸೇವೆಯನ್ನು ಮಾಡುತ್ತಾ ಬಂದಿರುವ ಸಂಗನಗೌಡ (ಮಿಥುನ್) ಜಿ.ಪಾಟೀಲರ ಕಾರ್ಯಕ್ರಮಗಳು ಜನರ ಜನಮಾನಸದಲ್ಲಿ ನೆಲೆ ನಿಂತಿವೆ”
-
ಬಸವರಡ್ಡಿ ಬಂಡಿಹಾಳ.
ಕಾಂಗ್ರೆಸ್ ಪಕ್ಷದ ಯುವ ಮುಖಂಡರು.



