HomePolitics Newsರಾಜ್ಯದಲ್ಲಿ ಕಾಂಗ್ರೆಸ್ ಇರಲ್ಲ, ಮುಂದೊಂದು ದಿನ ದೇಶದಲ್ಲೇ ಹುಡುಕುವ ಪರಿಸ್ಥಿತಿ ಬರತ್ತೆ; ರಮೇಶ್ ಜಿಗಜಿಣಗಿ

ರಾಜ್ಯದಲ್ಲಿ ಕಾಂಗ್ರೆಸ್ ಇರಲ್ಲ, ಮುಂದೊಂದು ದಿನ ದೇಶದಲ್ಲೇ ಹುಡುಕುವ ಪರಿಸ್ಥಿತಿ ಬರತ್ತೆ; ರಮೇಶ್ ಜಿಗಜಿಣಗಿ

For Dai;y Updates Join Our whatsapp Group

Spread the love

ವಿಜಯಪುರ: ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತಿದೆ. ಅದರಂತೆ ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ, ಸತ್ಯನಾಶವಾಗಲಿದೆ. ಮುಂದೊಂದು ದಿನ ದೇಶದಲ್ಲೇ ಕಾಂಗ್ರೆಸ್ ಪಕ್ಷವನ್ನು ಹುಡುಕಬೇಕಾದ ಪರಿಸ್ಥಿತಿ ಬರಲಿದೆ ಎಂದು ಟೀಕಿಸಿದರು.

ನರೇಗಾ ಯೋಜನೆಯ ಕುರಿತು ಮಾತನಾಡಿದ ಜಿಗಜಿಣಗಿ, ಹಿಂದಿನ ದಿನಗಳಲ್ಲಿ ಈ ಯೋಜನೆಗೆ ಸ್ಪಷ್ಟವಾದ ಚೌಕಟ್ಟು ಇರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಿರಾಮ್‌ಜಿ ಹೆಸರಿನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸುವ ಜೊತೆಗೆ ಜನರಿಗೆ ನಿಜವಾದ ಅನುಕೂಲ ಒದಗಿಸುವ ಕೆಲಸ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನರೇಗಾ ಯೋಜನೆ ಸಮರ್ಥವಾಗಿ ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ರಾಜ್ಯ ಸರ್ಕಾರಗಳು ನರೇಗಾ ಯೋಜನೆಗೆ ಅನುದಾನ ನೀಡುವುದರಲ್ಲಿ ನಿರ್ಲಕ್ಷ್ಯ ತೋರಿಸುತ್ತಿದ್ದವು. ಈಗ 60:40 ಅನುದಾನದ ಪಾಲನ್ನು ಕಡ್ಡಾಯಗೊಳಿಸಲಾಗಿದೆ. ಅದೇ ಕಾರಣಕ್ಕೆ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ದೂರುತ್ತಿದೆ. ಹಿಂದೆ ಯೋಜನೆಯಲ್ಲಿ ಸರಿಯಾದ ಲೆಕ್ಕಾಚಾರವಿಲ್ಲದೆ, ನಕಲಿ ಹೆಸರಿನಲ್ಲಿ ಅನುದಾನ ದುರ್ಬಳಕೆ ಆಗುತ್ತಿತ್ತು. ಈಗ ಈ ಅವ್ಯವಹಾರಗಳಿಗೆ ಕಡಿವಾಣ ಬೀಳಲಿದೆ ಎಂದು ಜಿಗಜಿಣಗಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!