ಬೆಂಗಳೂರು :- ರಾಜಧಾನಿ ಬೆಂಗಳೂರಿನ ಬೇಗೂರಿನ ಬಳಿ ಅಗ್ನಿ ಅವಘಡ ಸಂಭವಿಸಿದೆ.
ಪ್ಲಾಸ್ಟಿಕ್ ವೇಸ್ಟೇಜ್ ಗಳನ್ನ ಡಂಪ್ ಮಾಡಿದ್ದ ಬೇಗೂರಿನ ಡಂಪಿಂಗ್ ಯಾರ್ಡ್ ನಲ್ಲಿ ಬೆಳಗಿನ ಜಾವ 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬೆನ್ನಲ್ಲೇ ಸುಮಾರು ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಅದೃಷ್ಟಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡ ಕಾರಣದ ಬಗ್ಗೆ ಸಿಬ್ಬಂದಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ.



