ಕನ್ನಡ ನಟಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಮ್ಮ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಕಾರುಣ್ಯಾ ಅವರು ಸಿಸಿಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಂಗಿ ಸಮೃದ್ಧಿ, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬವರ ವಿರುದ್ಧ ಆರೋಪ ಮಾಡಿದ್ದಾರೆ. ದೂರು ಪ್ರಕಾರ, ಸಮೃದ್ಧಿ ರಾಮ್ ಮೇಕಪ್ ಆರ್ಟಿಸ್ಟ್ ಆಗಿದ್ದು, ಬೆಟ್ಟಿಂಗ್ ಮೂಲಕ ಸುಮಾರು ₹25 ಲಕ್ಷ ಸಾಲ ಮಾಡಿಕೊಂಡಿದ್ದು, ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದು, ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ತೀರಿಸಲು ಮನೆಯ ಚಿನ್ನ ಮತ್ತು ಹಣವನ್ನು ವಂಚನೆ ಮಾಡಿದ್ದಾರೆ.
ಪರಿಣಾಮ, ಸಾಲಗಾರರು ಮನೆಗೆ ಬಂದು ಪೀಡಿಸುತ್ತಿದ್ದಾರೆ ಮತ್ತು ಹಣವನ್ನು ಬಳಸಿಕೊಂಡಿದ್ದ ವಿಚಾರವನ್ನು ಪ್ರಶ್ನಿಸಿದ್ದಕ್ಕಾಗಿ ನನ್ನನ್ನು ಮನೆಯಿಂದ ಹೊರ ಹಾಕಿದ್ದಾರೆ. ಅಲ್ಲದೇ ವಾಟ್ಸಪ್ನಲ್ಲಿ ಅಶ್ಲೀಲ ಸಂದೇಶ, ಸಾಮಾಜಿಕ ಜಾಲತಾಣದಲ್ಲಿ ಹಾಕುವ ಫೋಟೋಗಳಿಗೆ ಕೆಟ್ಟದಾಗಿ ಕಾಮೆಂಟ್ ಮಾಡಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ NCR ದಾಖಲಾಗಿತ್ತು. ಈಗ ಕಾರುಣ್ಯ ರಾಮ್ ಸಹೋದರಿ ವಿರುದ್ಧ ಸಿಸಿಬಿಯಲ್ಲಿ ದೂರು ನೀಡಿದ್ದಾರೆ.



