ಬೆಂಗಳೂರು: ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ನಾಲ್ಕು ವರ್ಷದ ಮಗಳನ್ನು ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತರನ್ನು ಸೀತಾ (29) ಮತ್ತು ಅವರ ಪುತ್ರಿ ಸೃಷ್ಟಿ (4) ಎಂದು ಗುರುತಿಸಲಾಗಿದೆ. ಈ ಘಟನೆ ಸಂಜಯನಗರದ ಕೃಷ್ಣಪ್ಪ ಲೇಔಟ್ನಲ್ಲಿ ನಡೆದಿದ್ದು, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದೆ.
ನಿನ್ನೆ ಸಂಜೆ ಸುಮಾರು 7.30ರ ವೇಳೆಗೆ ಈ ಘಟನೆ ನಡೆದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯನಗರ ಪೊಲೀಸರು ತನಿಖೆ ಆರಂಭಿಸಿದ್ದು, ಪತಿ-ಪತ್ನಿ ನಡುವಿನ ಜಗಳವೇ ಈ ದುರ್ಘಟನೆಗೆ ಕಾರಣವಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ಹೊರಬೀಳಬೇಕಿದೆ.



