ಬಳ್ಳಾರಿ: ಬಳ್ಳಾರಿ ನಗರದ ಪುಲ್ಲಯ್ಯ ಕಾಂಪೌಂಡ್ ಒಳ ಆವರಣದಲ್ಲಿ ತಡರಾತ್ರಿ ಪಡಿತರ ಅಕ್ಕಿ ಸಾಗಾಟದ ಅಡ್ಡೆ ಮೇಲೆ ಬಳ್ಳಾರಿ ಸಹಾಯಕ ಆಯುಕ್ತ ರಾಜೇಶ್ ನೇತೃತ್ವದಲ್ಲಿ ದಾಳಿ ನಡೆಸಿ 523 ಚೀಲ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಪಡಿತರ ಅಂಗಡಿಗಳಿಂದ ಪಿಕಪ್ ಆಟೋ ಮೂಲಕ ಅಕ್ರಮವಾಗಿ ಸಂಗ್ರಹಿಸಿದ ಅಕ್ಕಿಯನ್ನು ಗುಜರಾತ್ ಮೂಲದ ದೊಡ್ಡ ಲಾರಿಯಲ್ಲಿ ತುಂಬಿ ಸಾಗಿಸಲು ಯತ್ನಿಸುತ್ತಿದ್ದರು. ಸಣ್ಣ ವಾಹನದಿಂದ ದೊಡ್ಡ ಲಾರಿಗೆ ಅಕ್ಕಿ ತುಂಬುತ್ತಿರುವ ಸಮಯದಲ್ಲೇ ದಾಳಿ ನಡೆದಿದೆ. ದಾಳಿ ವೇಳೆ ಒಂದು ದೊಡ್ಡ ಲಾರಿ, ಎರಡು ಪಿಕಪ್ ಆಟೋಗಳು, ಇಬ್ಬರು ಗುಜರಾತ್ ಮೂಲದ ಚಾಲಕರು, ಬಳ್ಳಾರಿ ಮೂಲದ ಒಬ್ಬ ಚಾಲಕ ಮತ್ತು ಐವರು ಹಮಾಲಿಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೂ ಒಬ್ಬ ಚಾಲಕ ಮತ್ತು ಐವರು ಹಮಾಲಿಗಳು ಪರಾರಿಯಾಗಿದ್ದಾರೆ. ಅಕ್ಕಿಯನ್ನು ಅಕ್ರಮವಾಗಿ ಗುಜರಾತ್ ರಾಜ್ಯಕ್ಕೆ ಸಾಗಿಸಲು ಯತ್ನಿಸಿದವರ ವಿರುದ್ಧ A.P.MC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



