ಮಂಡ್ಯ: ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಅವರ ಸ್ಥಾನಕ್ಕೆ ಶೋಭೆ ತರುವಂತ ಮಾತಗಳನ್ನಾಡಲಿ. ಅವರು ರಾಜಕೀಯವಾಗಿ ಬೆಳೆದು ಬಂದ ದಾರಿಯನ್ನ ಮರೆತಿದ್ದಾರೆ. ಆ ದಾರಿಯನ್ನ ಮರೆತಿರುವವರು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.
ಮಂಡ್ಯದ ಹನಕೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ನಮಗೂ ನಾಲಿಗೆಯಿದೆ ಅವರ ತರ ಹರಿಬಿಡುವುದಿಲ್ಲ. ಸಮಯ ಬಂದಾಗ ಜಿಲ್ಲೆಯ ಜನ ಇದಕ್ಕೆ ಉತ್ತರ ಕೊಡ್ತಾರೆ. ಅವರು ಹೇಳಿಕೆ ಕೊಡುವುದಕ್ಕಿಂತ ಮುಂಚೆ ಯೋಚನೆ ಮಾಡಿ ಮಾತನಾಡಲಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಅನ್ನು ಓಡಿಸುವಂತ ಶಕ್ತಿ ಇರುವುದು ಜಿಲ್ಲೆಯ ಜನತೆಗೆ. ಯಾರನ್ನ ಜಿಲ್ಲೆಯಲ್ಲಿ ಉಳಿಸಿಕೊಬೇಕು ಯಾರನ್ನ ಕಳಿಸಬೇಕು ಎಂದು ಜಿಲ್ಲೆಯ ಜನ ತೀರ್ಮಾನಿಸುತ್ತಾರೆ. ಕಳೆದ ಎರಡೂವರೆ ವರ್ಷದ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ರಾಜ್ಯದ ಜನ ನೋಡಿದ್ದಾರೆ. ಇವತ್ತು ಗಲ್ಲಿ ಗಲ್ಲಿ ಗಲ್ಲಿಯಲ್ಲಿ ರಾಜ್ಯ ಸರ್ಕಾರವನ್ನು ಬಾಯಿಗೆ ಬಂದಂಗೆ ಬೈತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಬಿಜೆಪಿ ಮೈತ್ರಿ ಗಟ್ಟಿಯಾಗಿದೆ. ರಾಷ್ಟ್ರಮಟ್ಟದ ನಾಯಕರ ಜೊತೆ ನಮ್ಮ ಮೈತ್ರಿ ಆಗಿದೆ. ರಾಜ್ಯದಲ್ಲಿ ನಮ್ಮ ಬಿಜೆಪಿ ಮೈತ್ರಿಗೆ ಯಾವುದೇ ಅಡ್ಡಿ ಆತಂಕ ಇಲ್ಲ ಮೈತ್ರಿ ಗಟ್ಟಿಯಾಗಿದೆ. ಇಲ್ಲಿನ ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಕಳೆದುಕೊಳ್ಳೋ ಭೀತಿಯಲ್ಲಿ ಮೈತ್ರಿ ಬೇಡ ಅಂತಿದ್ದಾರೆ. ನಾವು ನೀವು ಮೈತ್ರಿ ಬಗ್ಗೆ ಚರ್ಚೆ ಮಾಡಿದ್ರೆ ಏನು ಸಿಗುವುದಿಲ್ಲ ಎಂದು ಹೇಳಿದರು.
ಇದಕ್ಕೂ ಮುನ್ನ ಮಂಡ್ಯ ಜಿಲ್ಲೆಯ ಹನಕೆರೆ, ಬೂದನೂರು. ಕೊಮ್ಮೇರಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ ಕೋರಿದರು.ಕಾರ್ಯಕರ್ತರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡರು. ಮಂಡ್ಯದ ಹನಕರೆ ಬಳಿ ಟ್ರ್ಯಾಕ್ಟರ್ ಗಳ ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿ, ಹಾರ ಹಾಕಿ ನಿಖಿಲ್ ಕುಮಾರಸ್ವಾಮಿ ಅವರನ್ನ ಜೆಡಿಎಸ್ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಪ್ರಮುಖ ಮುಖಂಡರು ಅದ್ದೂರಿಯಾಗಿ ಸ್ಚಾಗತ ಕೋರಿದರು.
ನಂತರ ಮಂಡ್ಯ ಹುಲಿವಾನ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಲಭೈರವೇಶ್ವರಸ್ವಾಮಿ ಮಹಾದ್ವಾರ, ಶ್ರೀ ಹಿರಿದೇವಮ್ಮ ಶ್ರೀ ಅಚ್ಚಾಳಮ್ಮ ಮತ್ತು ಶ್ರೀ ಅಟ್ಟಿಲಕ್ಕಮ್ಮನವರ ದೇವಸ್ಥಾನ ಲೋಕಾರ್ಪಣೆ ಸಮಾರಂಭದಲ್ಲಿ ಗ್ರಾಮಸ್ಥರು ಎತ್ತಿನಗಾಡಿ ಮೂಲಕ ಅದ್ದೂರಿ ಸ್ವಾಗತ ಕೋರಿದರು.



