ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಶ್ರೀಮಂತಗಡದ ಶ್ರೀ ಹೊಳಲಮ್ಮದೇವಿ ದೇವಸ್ಥಾನದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರಿಂದ ಗರ್ಭಗುಡಿಯನ್ನು ಮುಚ್ಚಲಾಗಿತ್ತು.
ಇದೀಗ ಶ್ರೀ ಹೊಳಲಮ್ಮದೇವಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ನಿಮಿತ್ತ ಜ.23ರ ಶುಕ್ರವಾರ ಸಾಯಂಕಾಲ 5.30ಕ್ಕೆ ಗೋಮಾತಾ ಪೂಜೆ, ಮುತ್ತೈದೆಯರಿಂದ ಪೂರ್ಣಕುಂಭ ಪೂಜಾ ಪ್ರವೇಶ ಕಾರ್ಯಕ್ರಮ ನೆರವೇರಿದ್ದು, ಜ.24ರಂದು ದೇವತಾ ಶಾಂತಿ ಪೂಜಾ ಕಾರ್ಯಕ್ರಮ ಜರುಗಲಿದೆ. ಜ.25ರಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಹೊಳಲಮ್ಮ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವತಾ ಶಾಂತಿಹೋಮ, ಗೋ ಹೋಮ, ಪೂರ್ಣಾಹುತಿ ಕಾರ್ಯಕ್ರಮ ನಡೆಯಲಿದೆ.
ಈ ಎಲ್ಲಾ ಕಾರ್ಯಕ್ರಮಗಳು ಬನ್ನಿಕೊಪ್ಪದ ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳ್ಳಟ್ಟಿಯ ಬಸವರಾಜ ಸ್ವಾಮೀಜಿ ಇವರ ಅಮೃತ ಹಸ್ತದಿಂದ ನೆರವೇರಲಿದೆ ಎಂದು ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.



