HomeKarnataka Newsಮಹಾ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ಸಂತಾಪ

ಮಹಾ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ಸಂತಾಪ

For Dai;y Updates Join Our whatsapp Group

Spread the love

ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಮಾನ ಲ್ಯಾಂಡಿಂಗ್ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಅಜಿತ್ ಪವಾರ್ ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಅತ್ಯಂತ ಕ್ರಿಯಾಶೀಲ ವ್ಯಕ್ತಿಯಾಗಿದ್ದು, ರೈತರ ಬದುಕಿನಲ್ಲಿ ಬದಲಾವಣೆ ತರಲು ಸದಾ ಶ್ರಮಿಸುತ್ತಿದ್ದರು ಎಂದು ಪಾಟೀಲ್ ಸ್ಮರಿಸಿದರು. ಕಳೆದ 10 ವರ್ಷಗಳ ಅವಧಿಯಲ್ಲಿ ಅಜಿತ್ ಪವಾರ್ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ತಾವು ಎಐಸಿಸಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ಅಜಿತ್ ಪವಾರ್ ಅವರ ಕಾರ್ಯಶೈಲಿಯನ್ನು ನೇರವಾಗಿ ಗಮನಿಸಿದ್ದೇನೆ ಎಂದು ಹೆಚ್.ಕೆ. ಪಾಟೀಲ್ ಹೇಳಿದರು.

ಶರದ್ ಪವಾರ್ ಅವರ ಸಹೋದರನ ಮಗನಾದ ಅಜಿತ್, ಮಹಾರಾಷ್ಟ್ರ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದರು. ಎನ್‌ಡಿಎ ಸೇರಿ ಗಮನ ಸೆಳೆದಿದ್ದ ಇವರು, ಹಲವು ಬಾರಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಬಾರಾಮತಿಯಿಂದ ನಿರಂತರವಾಗಿ ಶಾಸಕರಾಗಿ ಆಯ್ಕೆಯಾಗಿದ್ದ ಅವರ ಅಗಲಿಕೆ ರಾಜಕೀಯ ವಲಯದಲ್ಲಿ ಆಘಾತ ಮೂಡಿಸಿದೆ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!