Homekoppalತಂಗಡಗಿ ಜೀವಂತಿಕೆ ತೋರಿಸಿಕೊಳ್ಳುವ ಕಾಗದದ ಹುಲಿ: ದೊಡ್ಡನಗೌಡ

ತಂಗಡಗಿ ಜೀವಂತಿಕೆ ತೋರಿಸಿಕೊಳ್ಳುವ ಕಾಗದದ ಹುಲಿ: ದೊಡ್ಡನಗೌಡ

For Dai;y Updates Join Our whatsapp Group

Spread the love

-ನ.18 ಜನಸ್ವರಾಜ್ ಯಾತ್ರೆಗೆ ಸಿಎಂ ಚಾಲನೆ

 

ವಿಜಯಸಾಕ್ಷಿ ಸುದ್ದಿ,

ಕೊಪ್ಪಳ: ಮಾಜಿ ಸಚಿವ ಶಿವರಾಜ ತಂಗಡಗಿಯವರನ್ನು ಮಾತ್ರವಲ್ಲ, ಅವರ ಹೇಳಿಕೆಗಳನ್ನು ಉದಾಸೀನ ಮಾಡುತ್ತೇವೆ. ಏಕೆಂದರೆ ಅವರೀಗ ಬರೀ ಕಾಗದದ ಹುಲಿ. ಜೀವಂತವಾಗಿದ್ದೇನೆ ಎಂದು ತೋರಿಸಿಕೊಳ್ಳಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಕಿಡಿ ಕಾರಿದರು.

ಕೊಪ್ಪಳ ಮೀಡಿಯಾ ಕ್ಲಬ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿಯವರು ಸರಕಾರದ ಅವಧಿ ಪೂರ್ಣಗೊಳ್ಳುವವರೆಗೂ ಮುಖ್ಯಮಂತ್ರಿಯಾಗಿ ಇರುತ್ತಾರೆ. ಬಿಜೆಪಿ ಶಿಸ್ತಿನ ಪಕ್ಷ. ಕಾಂಗ್ರೆಸ್ ನಾಯಕರಿಗೆ ಅದರಲ್ಲೂ ಮಾಜಿ ಸಚಿವ ಶಿವರಾಜ ತಂಗಡಗಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹಾಗಾಗಿ ಇಂಥ ಹೇಳಿಕೆಗಳನ್ನು ನೀಡುತ್ತಾರೆ. ಅವರ ಹೇಳಿಕೆಗಳಿಗೆ ಬೆಲೆ ನೀಡುವ ಅಗತ್ಯ ಇಲ್ಲ ಎಂದು ಪಾಟೀಲ ಹೇಳಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 18ರಿಂದ ಜನಸ್ವರಾಜ್ ಯಾತ್ರೆ ಆರಂಭಗೊಳ್ಳುತ್ತದೆ. ಯಾತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಕೊಪ್ಪಳದಿಂದ ಆರಂಭಗೊಳ್ಳುವ ಜನಸ್ವರಾಜ್ ಯಾತ್ರೆಯು ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ನೇತೃತ್ವದಲ್ಲಿ ಮುನ್ನಡೆಯಲಿದೆ ಎಂದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ನ.18 ಗುರುವಾರ ದಂದು ಜನಸ್ವರಾಜ್ ಯಾತ್ರೆಯ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾಧ್ಯಕ್ಷ ದೊಡ್ಡನಗೌಡ ಎಚ್.ಪಾಟೀಲ ಕರೆ ನೀಡಿದರು.

ಕೊಪ್ಪಳದಲ್ಲಿ ಪ್ರಾರಂಭಗೊಳ್ಳುವ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟಿಲ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಮುರೇಗೇಶ್ ನಿರಾಣಿ, ವಿ.ಸೋಮಣ್ಣ, ಹಾಲಪ್ಪ ಆಚಾರ್, ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೆದಾರ, ಎನ್.ಮಹೇಶ, ಮೈಸೂರು ಸಂಸದ ಪ್ರತಾಪಸಿಂಹ ಅವರ ಜೊತೆಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗೂರು ಸೇರಿದಂತೆ ಅನೇಕ ಬಿಜೆಪಿ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸುವರು ಎಂದರು.

ವಿಧಾನ ಪರಿಷತ್ ಚುನಾವಣೆಗಾಗಿ ಬಿಜೆಪಿಯಿಂದ ಸ್ಪರ್ಧಿಸಲು ನವೀನ್‍ಕುಮಾರ್ ಗುಳಗಣ್ಣವರ್ ಹಾಗೂ ಸಿ.ವಿ.ಚಂದ್ರಶೇಖರ ಸೇರಿದಂತೆ ಮೂರು ಹೆಸರುಗಳನ್ನು ವರಿಷ್ಠರಿಗೆ ಕಳುಹಿಸಲಾಗಿದೆ. ಹಾಗೆಯೇ ರಾಯಚೂರು ಜಿಲ್ಲೆಯಿಂದ ಐದು ಹೆಸರುಗಳನ್ನು ಕಳುಹಿಸಲಾಗಿದ್ದು, ಇಂದು ನಾಳೆಯೊಳಗಾಗಿ ಪಕ್ಷವು ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದೆ ಎಂದರು.

ಕೊಪ್ಪಳದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಸಹ ಪ್ರಭಾರಿ ಚಂದ್ರಶೇಖರಗೌಡ ಪಾಟೀಲ ಹಲಗೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ಗುಳಗಣ್ಣವರ್, ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಗಿರೀಶಾನಂದ ಜ್ಞಾನಸುಂದರ, ಸಹ ಸಂಚಾಲಕ ಶ್ರೀನಿವಾಸ್ ಪೂಜಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!