HomeKarnataka Newsಬಳ್ಳಾರಿ ನಗರದಲ್ಲಿ ಕಾನೂನು ಶಾಂತಿ ಹದಗೆಟ್ಟಿದೆ; ಕ್ರಮಕ್ಕೆ ಜನಾರ್ದನ ರೆಡ್ಡಿ ಆಗ್ರಹ

ಬಳ್ಳಾರಿ ನಗರದಲ್ಲಿ ಕಾನೂನು ಶಾಂತಿ ಹದಗೆಟ್ಟಿದೆ; ಕ್ರಮಕ್ಕೆ ಜನಾರ್ದನ ರೆಡ್ಡಿ ಆಗ್ರಹ

For Dai;y Updates Join Our whatsapp Group

Spread the love

ಬಳ್ಳಾರಿ/ಬೆಂಗಳೂರು: ಬಳ್ಳಾರಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಶಾಸಕ ಜನಾರ್ದನ ರೆಡ್ಡಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಅವರು ಬಳ್ಳಾರಿ ಫೈರಿಂಗ್ ಪ್ರಕರಣವನ್ನು ತಮ್ಮ ಮುಂದಿನ ಹೋರಾಟದಲ್ಲಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದ ಹಲವು ವಾರ್ಡ್‌ಗಳಲ್ಲಿ ಯುವಕರು ಗ್ಯಾಂಗ್‌ಸ್ಟರ್ ತಂತ್ರದಲ್ಲಿ ನಡೆಯುತ್ತಿದ್ದಾರೆ. ಅಕ್ರಮ ಹಣ ಲಾಭಕ್ಕಾಗಿ ಹೋರಾಟ ನಡೆಸುತ್ತಿರುವುದು ಆತಂಕಕಾರಿ. ಪ್ರಮುಖವಾಗಿ, ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡು ಹಾರಿಸಲಾಗಿದ್ದು, ಖಾಸಗಿ ಗನ್‌ಮ್ಯಾನ್‌ಗಳ ಕಾರ್ಯ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಶಾಸಕರು ಸಿಬಿಐ ತನಿಖೆ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ. “ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟವನ್ನು ಮುಂದುವರಿಸುವುದು ಖಚಿತ.
ಬಳ್ಳಾರಿಯಲ್ಲಿ ಶಾಂತಿ, ಕಾನೂನು ಪಾಲನೆ ಮತ್ತು ತ್ವರಿತ ಅಭಿವೃದ್ಧಿಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಯುವ ಗ್ಯಾಂಗ್‌ಸ್ಟರ್‌ಗಳ ಚಟುವಟಿಕೆಗಳನ್ನು ತಡೆಯಬೇಕು ಎಂಬ ಭಾವನೆ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!