ಬೆಂಗಳೂರು:- ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕೆಜಿ ರಸ್ತೆಯ ಕಂದಾಯ ಭವನ ಬಳಿ ಜರುಗಿದೆ.
ತಡರಾತ್ರಿ 12.40 ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತ ಎಸಗಿ ಅಪರಿಚಿತ ವಾಹನ ಚಾಲಕ ಪರಾರಿ ಆಗಿದ್ದಾನೆ. ಕೂಡಲೇ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದರು.
ಬಳಿಕ ಆಟೋದಲ್ಲಿ ಗಾಯಾಳುವನ್ನ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಡಿಕ್ಕಿ ಹೊಡೆದು ಎಸ್ಕೇಪ್ ಆದ ಅಪರಿಚಿತ ವಾಹನಕ್ಕೆ ಪೊಲೀಸರು ಶೋಧ ಕೈಗೊಂಡಿದ್ದಾರೆ. ಹಲಸೂರು ಗೇಟ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



