HomeCrime Newsಯುವಕರಿಗೆ ಸ್ಫೂರ್ತಿಯಾಗಿದ್ದ ಸಿ.ಜೆ. ರಾಯ್: ಸಾವಿರಾರು ಕೋಟಿ ಒಡೆಯ ಸಾವಿಗೆ ಶರಣಾಗಿದ್ದು ಏಕೆ?

ಯುವಕರಿಗೆ ಸ್ಫೂರ್ತಿಯಾಗಿದ್ದ ಸಿ.ಜೆ. ರಾಯ್: ಸಾವಿರಾರು ಕೋಟಿ ಒಡೆಯ ಸಾವಿಗೆ ಶರಣಾಗಿದ್ದು ಏಕೆ?

For Dai;y Updates Join Our whatsapp Group

Spread the love

ಬೆಂಗಳೂರು: ಕೇರಳ ಮೂಲದ ಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ. ರಾಯ್ ಅವರು ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಸಂಚಲನ ಮೂಡಿಸಿದೆ. ಪದೇಪದೇ ಐಟಿ ಇಲಾಖೆ ದಾಳಿಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಈ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು ನಗರದಲ್ಲಿ ಸಿ.ಜೆ. ರಾಯ್ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಇದ್ದವು. ಅವರ ಅಕಾಲಿಕ ಸಾವು ಉದ್ಯಮ ವಲಯದಲ್ಲಿ ಆಘಾತಕ್ಕೆ ಕಾರಣವಾಗಿದ್ದು, ಈ ಘಟನೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಶ್ರೀಮಂತ ಉದ್ಯಮಿ, ಬಹುಮುಖ ಸಾಧನೆ

ಸಿ.ಜೆ. ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಹಾಗೂ ಸಂಸ್ಥಾಪಕರಾಗಿದ್ದರು. ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಅವರು, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದರು. ಜೊತೆಗೆ ಸ್ಲೋವಾಕ್ ಗಣರಾಜ್ಯದ ಗೌರವ ಕಾನ್ಸಲ್ ಆಗಿಯೂ ಕರ್ನಾಟಕ ಮತ್ತು ಕೇರಳದಲ್ಲಿ ಸೇವೆ ಸಲ್ಲಿಸಿದ್ದರು.

ಐಷಾರಾಮಿ ಕಾರುಗಳ ಸಂಗ್ರಹ

ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ರಾಯ್, ದುಬೈ ಮತ್ತು ಭಾರತದಲ್ಲಿ ಹಲವು ದುಬಾರಿ ಐಷಾರಾಮಿ ಹಾಗೂ ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು. ರೋಲ್ಸ್ ರಾಯ್ಸ್, ಲ್ಯಾಂಬೋರ್ಗಿನಿ, ಬುಗಾಟಿ ವೇರಾನ್ ಸೇರಿದಂತೆ ಅಪರೂಪದ ಕಾರುಗಳು ಅವರ ಸಂಗ್ರಹದಲ್ಲಿದ್ದವು.

ಚಿತ್ರ ನಿರ್ಮಾಣಕ್ಕೂ ಕೈಹಾಕಿದ್ದ ಉದ್ಯಮಿ

ಕಾನ್ಫಿಡೆಂಟ್ ಗ್ರೂಪ್ ಕೇವಲ ರಿಯಲ್ ಎಸ್ಟೇಟ್‌ಗೆ ಸೀಮಿತವಾಗಿರಲಿಲ್ಲ. ಸಿ.ಜೆ. ರಾಯ್ ಅವರ ಬಹುಮುಖ ಆಸಕ್ತಿಯಿಂದ ಸಂಸ್ಥೆ ವಿವಿಧ ಕ್ಷೇತ್ರಗಳಿಗೆ ವಿಸ್ತರಿಸಿತ್ತು. ಮಲಯಾಳಂ ಮತ್ತು ಕನ್ನಡದಲ್ಲಿ 11 ಚಿತ್ರಗಳನ್ನು ನಿರ್ಮಿಸಿದ್ದು, ‘ಮರಕ್ಕಾರ್’ ಎಂಬ ಅತಿ ದೊಡ್ಡ ಬಜೆಟ್‌ನ ಮಲಯಾಳಂ ಚಿತ್ರಕ್ಕೂ ಅವರು ನಿರ್ಮಾಪಕರಾಗಿದ್ದರು. 2006ರಲ್ಲಿ ‘ಐಡಿಯಾ ಸ್ಟಾರ್ ಸಿಂಗರ್’ ಜನಪ್ರಿಯ ಟಿವಿ ಕಾರ್ಯಕ್ರಮಕ್ಕೆ ಹಣಕಾಸು ಒದಗಿಸಿ ಕಾನ್ಫಿಡೆಂಟ್ ಗ್ರೂಪ್‌ನ್ನು ಪ್ರಚಾರ ಮಾಡಿದ್ದೂ ಗಮನಾರ್ಹ.

ಐಟಿ ದಾಳಿ ವೇಳೆ ನಡೆದ ದುರ್ಘಟನೆ

ಇಂದು ಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಎರಡು ಇನ್ನೋವಾ ಕಾರುಗಳಲ್ಲಿ ಬಂದ 8 ಸದಸ್ಯರ ತಂಡದೊಂದಿಗೆ ದಾಳಿ ನಡೆಸಿದ್ದರು. ಮಧ್ಯಾಹ್ನ ಕಚೇರಿಗೆ ಆಗಮಿಸಿದ ಸಿ.ಜೆ. ರಾಯ್ ಸುಮಾರು ಒಂದು ಗಂಟೆ ಕಾಲ ವಿಚಾರಣೆ ಎದುರಿಸಿದ್ದು, ಕೆಲ ದಾಖಲೆಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ ಮತ್ತಷ್ಟು ದಾಖಲೆ ತರಲು ರೂಮ್‌ಗೆ ತೆರಳಿದ ವೇಳೆ, ತಮ್ಮ ಪಿಸ್ತೂಲಿನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗುಂಡು ಹಾರಿಸಿದ ತಕ್ಷಣ ಐಟಿ ಅಧಿಕಾರಿಗಳು ಗನ್ ಕಿತ್ತುಕೊಂಡು ರಕ್ಷಣೆಗಾಗಿ ಪ್ರಯತ್ನಿಸಿದರೂ, ಅಷ್ಟರಲ್ಲಿ ರಾಯ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಹೆಚ್‌ಎಸ್‌ಆರ್ ಲೇಔಟ್‌ನ ನಾರಾಯಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ತನಿಖೆ ಮುಂದುವರಿಕೆ

ಘಟನೆಯ ಬಳಿಕ ಹಲವು ಅನುಮಾನಗಳು ಮೂಡಿವೆ. ಸಾಮಾನ್ಯವಾಗಿ ಐಟಿ ದಾಳಿ ವೇಳೆ ಅಗತ್ಯ ವಸ್ತುಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಆದರೆ ರಾಯ್ ಬಳಿಯಿದ್ದ ಗನ್ ವಶಕ್ಕೆ ಪಡೆಯಲಾಗಿರಲಿಲ್ಲ ಎಂಬುದು ಪ್ರಶ್ನೆ ಹುಟ್ಟುಹಾಕಿದೆ.

ಘಟನೆ ನಂತರ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಅವರು ಐಟಿ ಅಧಿಕಾರಿಗಳ ವಿಚಾರಣೆ ನಡೆಸಿದ್ದು, ದಾಳಿ ವೇಳೆ ಸಿಕ್ಕ ದಾಖಲೆಗಳನ್ನು ವಶಕ್ಕೆ ಪಡೆದು ಅಧಿಕಾರಿಗಳು ತೆರಳಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!