ಬೆಂಗಳೂರು:- ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದರ ಶೇ.5 ರಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ HD ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ ಹೇಳ್ತಾ ಸುಳ್ಳು ಹೇಳ್ತಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ್ದು ಕೇವಲ 20% ಅಂತಾರೆ. ರಾಜ್ಯ ಸರ್ಕಾರ ಹೆಚ್ಚಿನ ಹಣ ಹಾಕುವಾಗ, ಕೇಂದ್ರ ಸರ್ಕಾರದ ಮೇಲೆ ಏಕೆ ದೂಷಿಸುತ್ತಿದ್ದಾರೆ? ದರ ನಿಗದಿ ಮಾಡೋದು ಯಾರು? ಕೇಂದ್ರ ಸರ್ಕಾರದ ಮೇಲೆ ಹಾಕುವ ಚಾಳಿ ಅವರಿಗೆ. ಬೇರೆ ರಾಜ್ಯಗಳಲ್ಲಿ ಯಾಕೆ ದರ ಏರಿಕೆ ಆಗ್ತಿಲ್ಲ? ಇಲ್ಲಿ ನಮ್ಮದು ಹೆಚ್ಚಿನ ಪಾಲು ಅಂದ ಮೇಲೆ ಅಧಿಕಾರ ಯಾರಿಗೆ ಇದೆ? ಅಂತ ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಹಲವಾರು ತಪ್ಪು ನಿರ್ಣಯ, ಜನವಿರೋಧಿ ನೀತಿಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು. ಜನರಿಗೆ ಗ್ಯಾರಂಟಿ ಕೊಡ್ತಿದ್ದೇವೆ ಈ ಮೂಲಕ ಆರ್ಥಿಕವಾಗಿ ಶಕ್ತಿ ತುಂಬಿದ್ದೇವೆ ಅಂತಾರೆ. ರಾಜ್ಯದಲ್ಲಿ ತಲಾ ಆದಾಯ, ಆರ್ಥಿಕ ಶಕ್ತಿ ನೀಡಿದ್ದೇವೆ ಅಂತ ಪದೇ ಪದೇ ಜಾಹೀರಾತು ಕೊಡ್ತಿದ್ದಾರೆ. ಜನಕ್ಕೆ ತೊಂದರೆ ಇಲ್ಲ, ಆರ್ಥಿಕವಾಗಿ ಚೆನ್ನಾಗಿದ್ದಾರೆ ಅನ್ನೋದು ರಾಜ್ಯ ಸರ್ಕಾರದ ಭಾವನೆ. ಆದ್ದರಿಂದ ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳ ಭ್ರಮೆ ಎಂದು HD ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.



