HomeKarnataka Newsಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ....

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

For Dai;y Updates Join Our whatsapp Group

Spread the love

ಬೆಂಗಳೂರು: “ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿರುಗೇಟು ನೀಡಿದ್ದಾರೆ.ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣ ಬಳಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಮೆಟ್ರೋ ದರ ಏರಿಕೆ ಬಗ್ಗೆ ಅವರು ಮಾತನಾಡುವುದೇನೆ ಇದ್ದರೂ ಅದು ಪ್ರಧಾನಮಂತ್ರಿಗಳ ಮುಂದೆ ಮಾತನಾಡಲಿ.

ಮೆಟ್ರೋ ನಮ್ಮ ಯೋಜನೆ ಎಂದು ಪ್ರಚಾರ ಪಡೆಯುತ್ತಿರುವವರು ಯಾರು? ತೇಜಸ್ವಿ ಸೂರ್ಯ ಅವರು ಮೆಟ್ರೋ ನಮ್ಮ ಕೊಡುಗೆ ರಾಜ್ಯ ಸರ್ಕಾರದ್ದಲ್ಲ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಮೆಟ್ರೋ ಕೇಂದ್ರ ಸರ್ಕಾರದ ಸಮಿತಿ ಕೈಯಲ್ಲಿದೆ. ಆ ಸಮಿತಿ ತೀರ್ಮಾನದಂತೆ ಮೆಟ್ರೋ ದರ ಏರಿಕೆ ಮಾಡಲಾಗುತ್ತದೆ. ದರ ಏರಿಕೆ ಆಗಬಾರದು ಎಂಬುದೂ ನಮ್ಮ ಇಚ್ಛೆ. ತೇಜಸ್ವಿ ಸೂರ್ಯ ಅವರ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಅವರು ತೀರ್ಮಾನ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಿ” ಎಂದು ಸುರೇಶ್ ಅವರು ವಾಗ್ದಾಳಿ ನಡೆಸಿದರು.

“ಅವರು ಖಾಲಿ ಟ್ರಂಕ್ ಹಿಡಿದಿರುವುದು, ಕರ್ನಾಟಕದ 4.5- 5 ಲಕ್ಷ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿಕೊಂಡು ಹೋಗುತ್ತಿರುವುದನ್ನು ತೋರಿಸಲು. ಕೇಂದ್ರ ಸರ್ಕಾರ ಕಳೆದ 12 ವರ್ಷಗಳಿಂದ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಪಟ್ಟಿ ಹೇಳಲಿ. ಬೆಂಗಳೂರಿಗೆ ಅವರ ಕೊಡುಗೆ ಖಾಲಿ ಡಬ್ಬ ಎಂದು ತೇಜಸ್ವಿ ಸೂರ್ಯ ತೋರಿಸುತ್ತಿರುವುದನ್ನು ಮಾಧ್ಯಮಗಳು ಚೆನ್ನಾಗಿ ತೋರಿಸಿ” ಎಂದು ಕಿಡಿಕಾರಿದರು.

ದರ ಏರಿಕೆಗೆ ಕಾರಣ ಯಾರು? ಎಂದು ಕೇಳಿದಾಗ, “ರಾಜ್ಯ ಸರ್ಕಾರದ ಪಾತ್ರ ಇದೆ. ದರ ಇಳಿಕೆ ಬಗ್ಗೆ ಕೇಂದ್ರದ ಸಮಿತಿ ಮುಂದೆ ಪ್ರಸ್ತಾವನೆ ನೀಡಲಾಗಿದೆ. ಕೇಂದ್ರ ಸಮಿತಿಯ ತಾಂತ್ರಿಕ ಸಲಹಾ ಸಮಿತಿ ನಿರ್ದೇಶನದ ಮೇರೆಗೆ ಈ ತೀರ್ಮಾನ ಮಾಡಿದ್ದಾರೆ. ತೇಜಸ್ವಿ ಸೂರ್ಯ ಅವರು ತಮ್ಮ ಬದ್ಧತೆಯನ್ನು ಕೇಂದ್ರ ಸರ್ಕಾರದ ಮುಂದೆ ಪ್ರದರ್ಶಿಸಲಿ” ಎಂದು ತಿಳಿಸಿದರು.

ಮೆಟ್ರೋ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ನೀಡದಿರುವುದಕ್ಕೆ ದರ ಏರಿಕೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೆಟ್ರೋ ಯೋಜನೆಗಳಿಗೆ 10% ಹಣ ನೀಡುತ್ತದೆ. ರಾಜ್ಯ ಸರ್ಕಾರ 10% ಹಣದ ಜೊತೆಗೆ ಯೋಜನೆ ಜಾರಿಗೆ ಅಗತ್ಯವಿರುವ ಭೂಸ್ವಾಧೀನ ಪರಿಹಾರ ಮೊತ್ತವನ್ನು ಭರಿಸಬೇಕು. ಇದರಿಂದ ರಾಜ್ಯ ಸರ್ಕಾರದ ಪಾಲು ಸುಮಾರು 17%ರಷ್ಟು ಇರುತ್ತದೆ. ಉಳಿದ ಹಣವನ್ನು ಸಾಲದ ರೂಪದಲ್ಲಿ ಪಡೆಯಲಾಗುವುದು. ಅದರ ಹೊರೆ ಪ್ರಯಾಣಿಕರ ಮೇಲೆ ಬೀಳುತ್ತದೆ. ಸಮಯ ಸಿಕ್ಕಾಗ ಮೆಟ್ರೋ ನಮ್ಮದು ಎಂದು ಶೋ ಕೊಟ್ಟು, ಈಗ ಖಾಲಿ ಡಬ್ಬ ತೋರುತ್ತಿದ್ದಾರೆ” ಎಂದು ಹರಿಹಾಯ್ದರು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!