HomeGadag Newsಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲರ 34ನೇ ಪುಣ್ಯಸ್ಮರಣೋತ್ಸವ

ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲರ 34ನೇ ಪುಣ್ಯಸ್ಮರಣೋತ್ಸವ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರಿ ರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವ ದಿ. ಕೆ.ಎಚ್. ಪಾಟೀಲರ ಪುಣ್ಯಸ್ಮರಣೆಯನ್ನು ಸೋಮವಾರ ನಗರದ ದಿ. ಗದಗ ಕೋ-ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಅತ್ಯಂತ ಭಕ್ತಿ-ಗೌರವಗಳೊಂದಿಗೆ ಆಚರಿಸಲಾಯಿತು.

ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲರು ದಿ. ಕೆ.ಎಚ್. ಪಾಟೀಲರ ಭವ್ಯ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ.ಎಚ್. ಪಾಟೀಲರು ಸಹಕಾರಿ ಕ್ಷೇತ್ರ ಮತ್ತು ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಅಪ್ರತಿಮ ಕೊಡುಗೆಗಳನ್ನು ಸ್ಮರಿಸಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬೀಳಗಿ ಶಾಸಕ ಜಿ.ಟಿ. ಪಾಟೀಲ, ರೋಣ ಶಾಸಕ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ತಾಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಕಾಂಗ್ರೆಸ್ ಮುಖಂಡರಾದ ಎಸ್.ಎನ್. ಬಳ್ಳಾರಿ, ವಿದ್ಯಾಧರ ದೊಡ್ಡಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಾಬರ್ಚಿ, ಜಿ.ಪಂ ಮಾಜಿ ಅಧ್ಯಕ್ಷ ಸುಜಾತಾ ದೊಡ್ಡಮನಿ, ನಗರಸಭೆ ಮಾಜಿ ಅಧ್ಯಕ್ಷೆ ರುದ್ರಮ್ಮ ಕೆರಕಲಮಟ್ಟಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಉಮರಫಾರೂಖ್ ಹುಬ್ಬಳ್ಳಿ, ಮುಖಂಡರಾದ ವೀಣಾ ಕಟ್ನಳ್ಳಿ, ಶಾರೂಖ್ ಹುಯಿಲಗೋಳ, ಶಹಬಾಜ್ ಮುಲ್ಲಾ, ಶಂಭು ಕಾಳೆ, ಮಹಮ್ಮದ್ ಶಾಲಗಾರ, ಸರ್ಫರಾಜ್ ಬಾಬರ್ಚಿ, ವಿನಾಯಕ ಬಳ್ಳಾರಿ, ಸೈಯದ್‌ಖಾಲಿದ ಕೊಪ್ಪಳ, ಅನ್ವರ ನದಾಫ್, ಮಹಾಂತೇಶ ಮಡಿವಾಳರ, ಪರಪ್ಪ ಕಮತರ, ಕಮಲಾಕ್ಷಿ ಹಾದಿಮನಿ, ಯಲ್ಲಮ್ಮ ಜಡಿ, ದ್ರಾಕ್ಷಾಯಣಿ ಹಾಸಿಲ್ಕರ್, ಪೂಜಾ ಬೇವೂರ, ಮರಿಯಪ್ಪ ಸಣ್ಣತಂಗಿಯವರ, ಮಹೇಶ ಪಟ್ಟಣಶೆಟ್ಟಿ, ಜಾಕೀರ ಕುನ್ನಿಬಾವಿ, ಪರಮೇಶಪ್ಪ ಜಂತ್ಲಿ, ಕರಬಸಯ್ಯ ನಾಲ್ವಾಡಮಠ, ಮಲಿಕ್ ಸಂಗಾಪೂರ, ಉಮರ್‌ಫಾರೂಖ್ ಬಾರಿಗಿಡದ, ಅಭಿಷೇಕ, ಶಿವು ಹಾದಿಮನಿ, ಸಂತೋಷ ರಾಮೇನಹಳ್ಳಿ, ಮಹಮ್ಮದ್ ಬೆಟಗೇರಿ, ಅಜ್ಜಪ್ಪ ವಗ್ಗನ್ನವರ, ವಿರೂಪಾಕ್ಷ ನಂದೆಣ್ಣವರ, ಅಹ್ಮದ್ ಖಾಜಿ, ಹುಸೇನ್ ಓಲೇಕಾರ, ಅನ್ವರ ಶಿರಹಟ್ಟಿ, ಕಾಂಗ್ರೆಸ್ ಮುಖಂಡರು, ಕೆ.ಎಚ್. ಪಾಟೀಲ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ವಿವಿಧ ಇಲಾಖೆಗಳಲ್ಲಿ ನೈಪುಣ್ಯತೆಯನ್ನು ಕೆ.ಎಚ್. ಪಾಟೀಲರು ಹೊಂದಿದ್ದರು. ಅಂದು ಗದಗ-ಬೆಟಗೇರಿಯಲ್ಲಿ ನೀರಿನ ಸಮಸ್ಯೆ ಸಾಕಷ್ಟು ತಲೆದೋರಿತ್ತು. ಆ ನೀರಿನ ಸಮಸ್ಯೆಯನ್ನು ಬಗೆಹರಿಸಿ ನೀರಾವರಿ ಭೀಷ್ಮ ಎಂದೇ ಕರೆಯಿಸಿಕೊಂಡರು. ಶಿಕ್ಷಣ ಕ್ಷೇತ್ರದಲ್ಲಿಯೂ ಅಷ್ಟೇ ವಿಶೇಷ ಆಸಕ್ತಿಯನ್ನು ದಿ. ಕೆ.ಎಚ್. ಪಾಟೀಲರು ಹೊಂದಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಿದ್ದರು ಎನ್ನುವುದನ್ನು ಅವರ ಪುಣ್ಯ ಸ್ಮರಣೆಯ ದಿನದಂದು ನಾವು ಸ್ಮರಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಸಚಿವ ಎಚ್.ಕೆ. ಪಾಟೀಲ ನುಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!