HomeGadag Newsಕಾರ್ಮಿಕ ಸಂಹಿತೆಗಳ ಜಾರಿಗೆ ಕರಡು ನಿಯಮಗಳ ಪ್ರಕಟಣೆ: ಸಿಐಟಿಯು ಖಂಡನೆ

ಕಾರ್ಮಿಕ ಸಂಹಿತೆಗಳ ಜಾರಿಗೆ ಕರಡು ನಿಯಮಗಳ ಪ್ರಕಟಣೆ: ಸಿಐಟಿಯು ಖಂಡನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧದ ನಡುವೆಯೂ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ ಕರಡು ನಿಯಮಗಳನ್ನು ಪ್ರಕಟಿಸಿದೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಹ ಸಂಹಿತೆಗಳ ಜಾರಿಗೆ ‘ಕೈಗಾರಿಕಾ ಸಂಬಂಧಗಳ (ಕರ್ನಾಟಕ) ಕರಡು ನಿಯಮಗಳು-2026’ ಪ್ರಕಟಿಸುವ ಮೂಲಕ ರಾಜ್ಯದ ಕಾರ್ಮಿಕರಿಗೆ ದ್ರೋಹ ಬಗೆದಿವೆ ಎಂದು ಸಿಐಟಿಯು ಮುಖಂಡ ಎಂ.ಎಸ್. ಹಡಪದ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಸಂಹಿತೆಗಳ ರದ್ದತಿಗೆ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ನಡೆದ ಮುಷ್ಕರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಂವಿಧಾನದ ಅನುಚ್ಛೇದ 246ರ ಅನ್ವಯ ಕಾರ್ಮಿಕ ಕಾನೂನುಗಳು ಸಮವರ್ತಿ ಪಟ್ಟಿಯಲ್ಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಕಾನೂನುಗಳನ್ನು ರಚಿಸುವ ಅಧಿಕಾರ ಹೊಂದಿದೆ. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಾರ್ಮಿಕರ ಹಿತಾಸಕ್ತಿ ರಕ್ಷಿಸಲು ಕೇಂದ್ರದ ಬಿಜೆಪಿ ಸರ್ಕಾರ ರೂಪಿಸಿರುವ 4 ಕಾರ್ಮಿಕ ಸಂಹಿತೆಗಳನ್ನು ತಿರಸ್ಕರಿಸುವ, ಮಾರ್ಪಡಿಸುವ, ಹೊಸದಾಗಿ ಪರ್ಯಾಯ ಕಾರ್ಮಿಕ ಕಾನೂನು ರೂಪಿಸುವ ಸಂವಿಧಾನಬದ್ಧ ಅಧಿಕಾರ ಬಳಸುವ ಹೊಣೆಗಾರಿಕೆ ಇದ್ಯಾವುದನ್ನು ಪ್ರದರ್ಶಿಸಿಲ್ಲ ಎಂದು ಕಿಡಿಕಾರಿದರು.

ಕಾರ್ಮಿಕ ವಿರೋಧಿಯಾಗಿ ಪ್ರಕಟಿಸಿರುವ ಕರಡು ನಿಯಮಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು. ಆ ಮೂಲಕ ರಾಜ್ಯದಲ್ಲಿನ ಕಾರ್ಮಿಕರ ಸಂವಿಧಾನಬದ್ಧ ಮೂಲಭೂತ ಹಕ್ಕುಗಳನ್ನು ರಕ್ಷಣೆ ಮಾಡಬೇಕು ಎಂದರು.

ಡಿವಾಯ್‌ಎಫ್‌ಐ ಮುಖಂಡ ಎಫ್ ಎಫ್ ತೋಟದ ಮಾತನಾಡಿ, ತಾಲೂಕಿನ ಬಗರ್ ಹುಕ್ಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರಗಳನ್ನು ವಿತರಿಸಬೇಕು. ರಿಗ್ರಾಂಟ್ ಮೂಲಕ ತಾಲೂಕು ಬಗರ್ ಹುಕ್ಕುಂ ಸಮಿತಿ ಮೂಲಕ ರೈತರಿಗೆ ಹಕ್ಕು ಪತ್ರ ಆದೇಶವಾಗಿರುವರಿಗೆ ಆಕಾರ ಬಂದು, ಹಾಗೂ ಆರ್.ಟಿ.ಸಿ ಒಳಗೆ ಹೆಸರಿರುವ ರೈತರಿಗೆ ಪೋಡಿ ಮಾಡಿ ಕೊಡಬೇಕು ಎಂದು ಆಗ್ರಹಿಸಿದರು.

ಬೀದಿಬದಿ ವ್ಯಾಪರಸ್ಥರ ಸಂಘದ ಅಧ್ಯಕ್ಷ ಶಾಮೀದಸಾಬ ದಿಂಡವಾಡ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಪುರಸಭೆ ಆಡಳಿತ ಅವರ ಬೇಕು ಬೇಡಿಕೆಗಳಿಗೆ ಮತ್ತು ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಬೀದಿಬದಿ ವ್ಯಾಪಾರಸ್ಥರನ್ನು ಹತ್ತಿಕ್ಕುವ ಮೂಲಕ ನಿರಂತರ ದೌರ್ಜನ್ಯಗಳು ನಡೆಯುತ್ತಲೇ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕಟ್ಟಡ ಕಾರ್ಮಿಕ ಮುಖಂಡ ಮೆಹಬೂಬ್ ಹವಾಲ್ದಾರ, ರೂಪೇಶ ಮಾಳೋತ್ತರ, ವಿರೇಶ ಮಾಳೋತ್ತರ, ಅಂದಪ್ಪ ಕುರಿ, ಪರಶು ಅರಗಂಜಿ, ವಿರೇಶ ಇಟಗಿ, ಯಮನೂರ ಜಕ್ಕಲಿ, ಹನಮಂತ ಚಿಟಗಿ, ಅನಂದ ರಾಠೋಡ, ರೇಣಪ್ಪ, ಮೈಸೂರ ರಾಠೋಡ, ನೀಲಮ್ಮ ಹಿರೇಮಠ, ಶರಣಮ್ಮ ವಾಲಿ, ಮೈಲಾರಪ್ಪ ಮುತಾರಿ, ಮಾಂಡ್ರೆ ಸೇರಿದಂತೆ ಬಿಸಿಯೂಟ ನೌಕರರ ಸಂಘ, ಆಶಾ ನೌಕರರ ಸಂಘ, ಕಟ್ಟಡ ಕಾರ್ಮಿಕರ, ಗ್ರಾಪಂ ನೌಕರರು, ಅಂಗನವಾಡಿ, ವಿದ್ಯಾರ್ಥಿ-ಯುವಜನ ಸಂಘಟನೆ, ದೇವದಾಸಿ ಮಹಿಳಾ ಸಂಘಟನೆ, ಕೆಪಿಆರ್‌ಎಸ್ ಸೇರಿದಂತೆ ಸಾಮೂಹಿಕ ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು.

ಕಟ್ಟಡ ಕಾರ್ಮಿಕ ಸಂಘದ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿಗಳನ್ನು ನೀಡುವ ಮೂಲಕ ಅವರ ವ್ಯಾಪಾರದ ಸ್ಥಳವನ್ನು ಖಾತರಿಗೊಳಿಸಿ ಅವರಿಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರಿಗೆ ವ್ಯಾಪಾರ ಭದ್ರತೆಯನ್ನು ಖಾತರಿಗೊಳಿಸಬೇಕು. ಬೀದಿ ಬದಿ ವ್ಯಾಪಾರಸ್ಥ ಕಾಯ್ದೆಯನ್ನು ಪಟ್ಟಣ ಪಂಚಾಯಿತಿ ಪುರಸಭೆ ಸಮಗ್ರವಾಗಿ ಅನುಷ್ಠಾನಗೊಳಿಸಿ ಬೀದಿಬದಿ ವ್ಯಾಪರಸ್ಥರ ಹಿತಕಾಯಬೇಕು. ರಾಜ್ಯದಲ್ಲಿ ದುಡಿತದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!