ಕೊಪ್ಪಳ: “ಸಿದ್ದರಾಮಯ್ಯ ಇಲ್ಲದಿದ್ದರೆ ಯಾವ ಪಕ್ಷದವರಾದರೂ ಸರ್ಕಾರ ನಡೆಸುವುದು ಕಷ್ಟ. ಸಿಎಂ ಬದಲಾವಣೆ ಬಗ್ಗೆ ಯಾರೂ ಒಪ್ಪಿಕೊಳ್ತಿಲ್ಲ. ನಾನು ಹೈಕಮಾಂಡ್ ಸೂಚಿಸಿದರೆ ಮಾತ್ರ ರಾಜೀನಾಮೆ ಕೊಡುತ್ತೇನೆ” ಎಂದು ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಸಂಘರ್ಷವಿಲ್ಲ. ಆದರೆ ಜಗಳ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. “ಇಕ್ಬಾಲ್ ಹುಸೇನ್ ಮೊದಲ ಬಾರಿ ಶಾಸಕರಾಗಿದ್ದಾರೆ, ಸ್ವಲ್ಪ ಅನುಭವ ಕಡಿಮೆ. ಅವರು ಡಿ.ಕೆ ಶಿವಕುಮಾರ್ ಅವರೊಂದಿಗೆ ಹೆಚ್ಚು ಆತ್ಮೀಯರಿದ್ದಾರೆ. ಆದರೆ ಎಲ್ಲ ಶಾಸಕರು ಹಾಗೂ ರಾಹುಲ್ ಗಾಂಧಿ ಬಯಸುವುದು ಸಿದ್ದರಾಮಯ್ಯ ಮುಂದುವರಿಯಲಿ ಎನ್ನುವುದು” ಎಂದು ಹೇಳಿದರು.
“ಎರಡೂವರೆ ವರ್ಷ ಒಳ್ಳೆಯ ಆಡಳಿತ ಕೊಡಲಾಗಿದೆ, ಹೀಗಾಗಿ ಸಿದ್ದರಾಮಯ್ಯ ಮುಂದುವರಿಯಲಿ. 2028ಕ್ಕೆ ಡಿ.ಕೆ ಶಿವಕುಮಾರ್ ನೇತೃತ್ವಕ್ಕಾಗಿ ಪ್ರಸ್ತಾಪಿಸಬಹುದು. ಯಾರ ಅದೃಷ್ಟ ಇದ್ದರೆ ಅವರಿಗೆ ಅವಕಾಶ ಸಿಗಲಿ” ಎಂದು ಸ್ಪಷ್ಟಪಡಿಸಿದ್ದಾರೆ.



