ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಭಾರೀ ನಷ್ಟ ಸಂಭವಿಸಿದೆ. ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲ ನೀಡಲಿಲ್ಲ. 80 ವರ್ಷದ ಜೋ ಸೈಮನ್ ಅವರ ಅಗಲಿಕೆ ಸಿನಿರಂಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
1977ರಿಂದ ಆರಂಭವಾದ ಅವರ ನಿರ್ದೇಶನ ಪಯಣ ಹಲವು ದಶಕಗಳ ಕಾಲ ಮುಂದುವರಿದಿತು. ಆಕ್ಷನ್, ಥ್ರಿಲ್ಲರ್ ಹಾಗೂ ಪ್ರೇಮಕಥಾ ಚಿತ್ರಗಳ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಿದರು.
‘ಸಿಂಹ ಜೋಡಿ’, ‘ಸಾಹಸ ಸಿಂಹ’, ‘ಹಾಂಕಾಂಗ್ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ’, ‘ರವಿವರ್ಮ’, ‘ಟೈಂ ಬಾಂಬ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನೀಡಿದ್ದಾರೆ. ನಿರ್ದೇಶನ ಮಾತ್ರವಲ್ಲದೆ ನಟ ಹಾಗೂ ಗೀತರಚನೆಕಾರರಾಗಿ ಕೂಡ ತಮ್ಮ ಗುರುತು ಮೂಡಿಸಿದ್ದರು.
ಕನ್ನಡ ಚಿತ್ರರಂಗದ ಹಿರಿಯ ತಲೆಮಾರಿನೊಂದಿಗೆ ನಿಕಟ ಸಂಬಂಧ ಹೊಂದಿದ್ದ ಜೋ ಸೈಮನ್ ಅವರ ಅಗಲಿಕೆ ಒಂದು ಯುಗದ ಅಂತ್ಯವೆಂದು ಚಿತ್ರರಂಗದ ವಲಯಗಳು ಹೇಳುತ್ತಿವೆ. ಅವರ ಸ್ಮರಣೆ ಕನ್ನಡ ಸಿನಿ ಇತಿಹಾಸದಲ್ಲಿ ಸದಾಕಾಲ ಉಳಿಯಲಿದೆ.



